2:15 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ ಆತ್ಮಸಂತೃಪ್ತಿ ಇದೆ: ಶಾಸಕ ಡಾ. ಭರತ್ ಶೆಟ್ಟಿ

11/12/2022, 21:20

ಸುರತ್ಕಲ್(reporterkarnataka.com): ಜನಸಾಮಾನ್ಯರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಿ ಅವುಗಳನ್ನು ಕಾರ್ಯಗತಗೊಳಿಸಿದ ಆತ್ಮಸಂತೃಪ್ತಿ ನನ್ನಲ್ಲಿದೆ ಎಂದು ಶಾಸಕ ಡಾ. ವೈ ಭರತ್ ಶೆಟ್ಟಿ ನುಡಿದರು.

ಅವರು ಭಾನುವಾರದಂದು ಸುರತ್ಕಲ್ ವಿದ್ಯಾದಾಯಿನೀ ವಜ್ರಮಹೋತ್ಸವ ಸಭಾಂಗಣದಲ್ಲಿ ಸರಕಾರಿ ಇಲಾಖೆಗಳ ವಿವಿಧ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಳನೇ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ವಿವಿಧ ನಾಗರಿಕ ಮೂಲಭೂತ ಸೌಕರ್ಯಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಮಾತನಾಡಿದರು.

ಸರಕಾರಿ ಯೋಜನೆಗಳನ್ನು ಮೌಲ್ಯಯುತವಾಗಿ ನನ್ನ ಕ್ಷೇತ್ರದಲ್ಲಿ ಅನುಷ್ಠಾನಗೊಳಿಸಲಾಗಿದೆ. ಮೂಲಭೂತಸೌಕರ್ಯಗಳನ್ನು ಒದಗಿಸುವಲ್ಲಿ ಪಕ್ಷಾತೀತವಾಗಿ ಪ್ರಜಾಪ್ರಭುತ್ವದ ನೆಲೆಯಲ್ಲಿ ಸರ್ವರಿಗೂ ಒದಗಿಸಿದ್ದೇನೆ ಎಂದ ಅವರು ಮುಂದಿನ ದಿನಗಳನ್ನು ನನ್ನ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿ ಪಡಿಸುವ ಇರಾದೆಯನ್ನು ವ್ಯಕ್ತಪಡಿಸಿದರು.

ಸುರತ್ಕಲ್, ಪಣಂಬೂರು, ಬೈಕಂಪಾಡಿ ಪ್ರದೇಶದ ಸುತ್ತುಮುತ್ತಲಿನ ಪ್ರದೇಶಗಳಲ್ಲಿನ ಕೆಲವೊಂದು ರಸ್ತೆಗಳ ಕಾಂಕ್ರೀಟಿಕರಣ ಕಾಮಗಾರಿ ಪ್ರಗತಿಯಿಂದ ಸಾಗುತ್ತಿದೆ ಎಂದರು. ಸರಕಾರಿ ಹಕ್ಕು ಪತ್ರ,
ಪಿಂಚಣಿ ಯೋಜನೆ, ಜಾತಿ ಪ್ರಮಾಣ ಅದಾಯ ಪ್ರಮಾಣ ಪತ್ರ, ಆಭಾ ಕಾರ್ಡ್, ಮತದಾರರ ಪಟ್ಟಿ ನೊಂದಣಿ, ಕೃಷಿ ಇಲಾಖೆಯ ಸವಲತ್ತುಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.


ಮೇಯರ್ ಜಯಾನಂದ ಅಂಚನ್, ಸದಸ್ಯರಾದ ಶೋಭಾ ರಾಜೇಶ್, ನಯನಾ ಕೋಟ್ಯಾನ್,ವರುಣ್ ಚೌಟ, ವೇದಾವತಿ, ಸುಮಿತ್ರ ಕರಿಯ, ಸುನೀತಾ, ಸರಿತಾ ಶಶಿಧರ್, ಲೋಕೇಶ್ ಬೊಳ್ಳಾಜೆ, ಪ್ರಶಾಂತ್ ಮೂಡಾಯಿಕೊಡಿ,ಲಕ್ಷ್ಮೀ ಶೇಖರ ದೇವಾಡಿಗ, ರಾಜೇಶ್ ಬೈಕಂಪಾಡಿ, ಪಕ್ಷದ ಪ್ರಮುಖರಾದ ಸಂದೀಪ್ ಪಚ್ಚನಾಡಿ,ಗಣೇಶ್ ಹೊಸಬೆಟ್ಟು, ವಿಠಲಸಾಲ್ಯಾನ್, ವಸಂತ ಹೊಸಬೆಟ್ಟು,ಯೋಗಿಶ್ ಕುಳಾಯಿ, ಸುನೀಲ್ ಕುಳಾಯಿ, ರಾಘವೇಂದ್ರ ಶೆಣೈ,ದಿನಕರ್ ಇಡ್ಯಾ, ಪ್ರಮೀಳಾ ಕೋಟ್ಯಾನ್, ಪವಿತ್ರ ನಿರಂಜನ್,ಬೇಬಿ, ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು