8:12 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರ ಕ್ಷೇತ್ರದಲ್ಲಿ 6500ಕ್ಕೂ ಹೆಚ್ಚು ಮಂದಿಗೆ ಹಕ್ಕುಪತ್ರ ವಿತರಣೆ: ಶಾಸಕ ಡಾ. ಭರತ್ ಶೆಟ್ಟಿ ಸಾಧನೆ

24/03/2023, 10:18

ಮಂಗಳೂರು(reporterkarnataka.com): ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇದುವರೆಗೆ 6500ಕ್ಕೂ ಹೆಚ್ಚು ಹಕ್ಕುಪತ್ರ ನೀಡಲಾಗಿದೆ. ಇತರ ಯಾವುದೇ ಅಭಿವೃದ್ಧಿ ಕಾರ್ಯದ ಶಿಲಾನ್ಯಾಸ ಅಥವಾ ಉದ್ಘಾಟನೆ ಮಾಡುವುದಕ್ಕಿಂತ ಹೆಚ್ಚಿನ ಸಂತೃಪ್ತಿ, ಹಕ್ಕುಪತ್ರ ಸ್ವೀಕರಿಸುವಾಗ ಜನರ ಮುಖದಲ್ಲಿ ಕಾಣುತ್ತೇವೆ. ಜನಹಿತಕ್ಕಾಗಿ ಜನಪ್ರತಿನಿಧಿಗಳು, ಅಧಿಕಾರಿಗಳು ಒಗ್ಗೂಡಿ ಕೆಲಸ ಮಾಡಿದಲ್ಲಿ ಯಾವುದೇ ಕೆಲಸ ಕಷ್ಟಕರವಾಗದು. ಇಲ್ಲವಾದಲ್ಲಿ ಅಭಿವೃದ್ಧಿ ಕಾರ್ಯಕ್ಕೆ ಸಮತೋಲನ ಸಿಗದು ಎಂದು ಶಾಸಕರ ಡಾ. ಭರತ್ ಶೆಟ್ಟಿ ಹೇಳಿದರು.

ಕಂದಾವರ ಪಂಚಾಯತ್ ವ್ಯಾಪ್ತಿಯ ಕೌಡೂರಿನಲ್ಲಿ ಆಯೋಜಿಸಲಾದ ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಕಂದಾವರ ಪಂಚಾಯತ್ ವ್ಯಾಪ್ತಿಯ ಕೊಳಂಬೆ ಗ್ರಾಮದ ಕೌಡೂರಿನಲ್ಲಿ ನಿವೇಶನ

ಹಸ್ತಾಂತರದ ಜೊತೆಗೆ 170 ಕುಟುಂಬಗಳಿಗೆ ಹಕ್ಕುಪತ್ರ ನೀಡಿ ಮಾತನಾಡಿ, ಈಗ ಗುರುತಿಸಲಾದ ನಿವೇಶನದಲ್ಲಿ ಕಚ್ಚಾ ರಸ್ತೆ ನಿರ್ಮಿಸಲಾಗಿದೆ. ನಿಮ್ಮ ಆಶೀರ್ವಾದವಿದ್ದಲ್ಲಿ ಖಂಡಿತವಾಗಿಯೂ ಮುಂದಿನ ಅವಧಿಗೆ ಇಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಗೊಳ್ಳಲಿದೆ ಎಂದರು.
ಶಾಸಕರು ಹಕ್ಕುಪತ್ರದ ಮೂಲಪ್ರತಿ ವಿತರಿಸಿದರು. ಪಂಚಾಯತ್ ಅಧ್ಯಕ್ಷ ಉಮೇಶ, ಪಿಡಿಒ ಸೌಮ್ಯ ಹಾಗೂ ಗುರುಪುರ ನಾಡಕಚೇರಿಯ ಉಪತಹಶೀಲ್ದಾರ್ ಶಿವಪ್ರಸಾದ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು