3:29 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಮಂಗಳೂರು ಉತ್ತರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು: ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ

26/04/2023, 20:24

ಸುರತ್ಕಲ್(reporterkarnataka.com): ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಬುಧವಾರ ಬೆಳಗ್ಗೆ ಕಾಟಿಪಳ್ಳ, ಇಡ್ಯಾ, ಹೊಸಬೆಟ್ಟು, ಕುಳಾಯಿ, ಬೈಕಂಪಾಡಿ, ಪಣಂಬೂರು ಪರಿಸರದಲ್ಲಿ ಬಿಡುವಿಲ್ಲದೆ ಚುನಾವಣಾ ಪ್ರಚಾರ ನಡೆಸಿದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತಾಡಿದ ಅವರು, “ಮಂಗಳೂರು ಉತ್ತರ ಕ್ಷೇತ್ರವನ್ನು ಭವಿಷ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಗುರಿಯನ್ನು ಹೊಂದಿದ್ದು ಮತದಾರರನ್ನು ಭೇಟಿಯಾಗಿ ಮತ ಯಾಚನೆ ಮಾಡುತ್ತಿದ್ದೇನೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ಇದೆ. ಹೀಗಾಗಿ ಪ್ರತೀ ಮನೆಗಳನ್ನು ಕಾಂಗ್ರೆಸ್ ಗ್ಯಾರಂಟಿ ಅಭಿಯಾನದ ಮೂಲಕ ಜೋಡಿಸಲು ನಮ್ಮ ಕಾರ್ಯಕರ್ತರು ಶ್ರಮವಹಿಸಿ ದುಡಿಯುತ್ತಿದ್ದಾರೆ. ಜನರು ಬಿಜೆಪಿ ಸರಕಾರದ ಬೆಲೆ ಏರಿಕೆ, ನಿರುದ್ಯೋಗ ಮತ್ತಿತರ ಹೊರೆಗಳಿಂದ ಕಂಗಾಲಾಗಿದ್ದಾರೆ. ಮತ್ತೊಮ್ಮೆ ಅದೇ ಸರಕಾರ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಏನಾಗಬಹುದು ಎಂಬ ಸ್ಪಷ್ಟ ಅಂದಾಜು ಜನರಲ್ಲಿದೆ. ಹೀಗಾಗಿ ಜನವಿರೋಧಿ ಬಿಜೆಪಿ ಸರಕಾರಕ್ಕೆ ಜನರೇ ವಿರುದ್ಧವಾಗಿದ್ದಾರೆ” ಎಂದರು.


“ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ಜಾತಿ, ಸಮುದಾಯವನ್ನು ಪ್ರೀತಿಸುವ, ಯುವಜನರಿಗೆ, ವಿದ್ಯಾರ್ಥಿಗಳಿಗೆ ಮತ್ತು ಗೃಹಿಣಿಯರಿಗೆ ನೆರವಾಗುವ ಸುಭದ್ರ ಸರಕಾರ ಜನರಿಗೆ ದೊರೆಯಲಿದೆ. ಜನಸಾಮಾನ್ಯರು ಜೀವನ ಸಾಗಿಸಲು ಯಾವುದೇ ರೀತಿಯಲ್ಲಿ ಭಯ ಪಡಬೇಕಾದ ಅಗತ್ಯವಿಲ್ಲ” ಎಂದರು.
ಕಾಟಿಪಳ್ಳ ಜನತಾ ಕಾಲನಿಯ ಸಿರಿಗಳ ಬೀಡು, ಆಶ್ರಯ ಕಾಲನಿಯ ಕೊರಗಜ್ಜ ಕ್ಷೇತ್ರಕ್ಕೆ ಇನಾಯತ್ ಅಲಿ ಭೇಟಿ ಕೊಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಕೆಪಿಸಿಸಿ ವಕ್ತಾರೆ ಪ್ರತಿಭಾ ಕುಳಾಯಿ, ಜಲೀಲ್ ಬದ್ರಿಯಾ, ಸುರತ್ಕಲ್ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮುಹಮ್ಮದ್ ಸಮೀರ್ ಕಾಟಿಪಳ್ಳ, ರಾಘವೇಂದ್ರ ರಾವ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು