8:39 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

09/11/2022, 22:41

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com): ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು.



ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು ಜಾರಿಗೆ ಬಂದಾಗ ಅದರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎನ್ನುವಂತಹ ರಿಸರ್ಚ್ ನಡೆಯುತ್ತದೆ. ಕಾನೂನು ಪಾಲನೆಗೆ ಎಲ್ಲರೂ ಆದ್ಯತೆ ನೀಡಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಇಂಟರ್‌ನ್ಯಾಷನಲ್ ಜಸ್ಟಿಸ್ ಮಿಷನ್ ವಿಭಾಗ ಮುಖ್ಯಸ್ಥರಾದ ಪ್ರತಿಮಾ ಎಂ., ಮಾನವ ಕಳ್ಳ ಸಾಗಾಣಿಕೆಗೆ ವಿದ್ಯಾರ್ಥಿಗಳು ತೆಗೆದು ಕೊಳ್ಳಬೇಕಾದ ಕ್ರಮ ದ ಬಗ್ಗೆ ಜಾಗೃತಿ ಮೂಡಿಸಿದರು.


ವಿಶ್ವವಿದ್ಯಾಲಯ ಕಾಲೇಜ್‌ನ ಪ್ರಿನ್ಸಿಪಾಲ್ ಡಾ.ಅನಸೂಯ ರೈ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಇಂಚರ ಫೌಂಡೇಶನ್ ಯೋಗೀಶ್ ಮಲ್ಲಿಗೆ ಮಾಡು ಪುನರ್ವಸತಿಯ ಬಗ್ಗೆ ಮಾಹಿತಿ ನೀಡಿದರು.


ಎ. ಎಚ್. ಟಿ. ಸಿ. ಚೇರ್ಮ್ಯಾನ್ ಪ್ರೋ.ಜಯರಾಜ್ ಅಮೀನ್ ಸ್ವಾಗತಿಸಿದರು. ಡಾ.ಗಾಯತ್ರಿ ನಿರೂಪಿಸಿದರು. ಎ.ಎಚ್.ಟಿ.ಸಿ. ಸದಸ್ಯ ಕಾರ್ಯದರ್ಶಿ ಡಾ.ನಾಗರತ್ನ ಕೆ.ಎ.ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು