1:18 AM Sunday20 - July 2025
ಬ್ರೇಕಿಂಗ್ ನ್ಯೂಸ್
ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

09/11/2022, 22:41

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com): ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು.



ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು ಜಾರಿಗೆ ಬಂದಾಗ ಅದರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎನ್ನುವಂತಹ ರಿಸರ್ಚ್ ನಡೆಯುತ್ತದೆ. ಕಾನೂನು ಪಾಲನೆಗೆ ಎಲ್ಲರೂ ಆದ್ಯತೆ ನೀಡಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಇಂಟರ್‌ನ್ಯಾಷನಲ್ ಜಸ್ಟಿಸ್ ಮಿಷನ್ ವಿಭಾಗ ಮುಖ್ಯಸ್ಥರಾದ ಪ್ರತಿಮಾ ಎಂ., ಮಾನವ ಕಳ್ಳ ಸಾಗಾಣಿಕೆಗೆ ವಿದ್ಯಾರ್ಥಿಗಳು ತೆಗೆದು ಕೊಳ್ಳಬೇಕಾದ ಕ್ರಮ ದ ಬಗ್ಗೆ ಜಾಗೃತಿ ಮೂಡಿಸಿದರು.


ವಿಶ್ವವಿದ್ಯಾಲಯ ಕಾಲೇಜ್‌ನ ಪ್ರಿನ್ಸಿಪಾಲ್ ಡಾ.ಅನಸೂಯ ರೈ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಇಂಚರ ಫೌಂಡೇಶನ್ ಯೋಗೀಶ್ ಮಲ್ಲಿಗೆ ಮಾಡು ಪುನರ್ವಸತಿಯ ಬಗ್ಗೆ ಮಾಹಿತಿ ನೀಡಿದರು.


ಎ. ಎಚ್. ಟಿ. ಸಿ. ಚೇರ್ಮ್ಯಾನ್ ಪ್ರೋ.ಜಯರಾಜ್ ಅಮೀನ್ ಸ್ವಾಗತಿಸಿದರು. ಡಾ.ಗಾಯತ್ರಿ ನಿರೂಪಿಸಿದರು. ಎ.ಎಚ್.ಟಿ.ಸಿ. ಸದಸ್ಯ ಕಾರ್ಯದರ್ಶಿ ಡಾ.ನಾಗರತ್ನ ಕೆ.ಎ.ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು