7:45 AM Wednesday10 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

09/11/2022, 22:41

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com): ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು.



ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು ಜಾರಿಗೆ ಬಂದಾಗ ಅದರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎನ್ನುವಂತಹ ರಿಸರ್ಚ್ ನಡೆಯುತ್ತದೆ. ಕಾನೂನು ಪಾಲನೆಗೆ ಎಲ್ಲರೂ ಆದ್ಯತೆ ನೀಡಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಇಂಟರ್‌ನ್ಯಾಷನಲ್ ಜಸ್ಟಿಸ್ ಮಿಷನ್ ವಿಭಾಗ ಮುಖ್ಯಸ್ಥರಾದ ಪ್ರತಿಮಾ ಎಂ., ಮಾನವ ಕಳ್ಳ ಸಾಗಾಣಿಕೆಗೆ ವಿದ್ಯಾರ್ಥಿಗಳು ತೆಗೆದು ಕೊಳ್ಳಬೇಕಾದ ಕ್ರಮ ದ ಬಗ್ಗೆ ಜಾಗೃತಿ ಮೂಡಿಸಿದರು.


ವಿಶ್ವವಿದ್ಯಾಲಯ ಕಾಲೇಜ್‌ನ ಪ್ರಿನ್ಸಿಪಾಲ್ ಡಾ.ಅನಸೂಯ ರೈ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಇಂಚರ ಫೌಂಡೇಶನ್ ಯೋಗೀಶ್ ಮಲ್ಲಿಗೆ ಮಾಡು ಪುನರ್ವಸತಿಯ ಬಗ್ಗೆ ಮಾಹಿತಿ ನೀಡಿದರು.


ಎ. ಎಚ್. ಟಿ. ಸಿ. ಚೇರ್ಮ್ಯಾನ್ ಪ್ರೋ.ಜಯರಾಜ್ ಅಮೀನ್ ಸ್ವಾಗತಿಸಿದರು. ಡಾ.ಗಾಯತ್ರಿ ನಿರೂಪಿಸಿದರು. ಎ.ಎಚ್.ಟಿ.ಸಿ. ಸದಸ್ಯ ಕಾರ್ಯದರ್ಶಿ ಡಾ.ನಾಗರತ್ನ ಕೆ.ಎ.ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು