5:14 AM Saturday29 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜ್‌ನಲ್ಲಿ ಮಾನವ ಕಳ್ಳ ಸಾಗಾಣಿಕೆ ಕುರಿತು ಕಾರ್ಯಾಗಾರ

09/11/2022, 22:41

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(Reporterkarnataka.com): ಮಂಗಳೂರು ವಿಶ್ವ ವಿದ್ಯಾಲಯದ ಆ್ಯಂಟಿ ಹ್ಯೂಮನ್ ಟ್ರಾಫಿಕಿಂಗ್ ಕ್ಲಬ್ ವತಿಯಿಂದ ಮಾನವ ಕಳ್ಳ ಸಾಗಾಣಿಕೆ ವಿರೋಧಿ: ಕಾಳಜಿ ಹಾಗೂ ಕಾರ್ಯಯೋಜನೆ ಎಂಬ ಕಾರ್ಯಾಗಾರ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜ್‌ನ ರವೀಂದ್ರ ಕಲಾಭವನದಲ್ಲಿ ಬುಧವಾರ ನಡೆಯಿತು.



ಮಂಗಳೂರು ಉತ್ತರ ಉಪವಿಭಾಗ ಸಹಾಯಕ ಆಯುಕ್ತರಾದ ಮಹೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಭಾರತದಲ್ಲಿ ಇರುವಷ್ಟು ಕಾನೂನು ಬೇರೆಲ್ಲಿಯೂ ಇಲ್ಲ ಆದರೆ ಸರಿಯಾಗಿ ಬಳಸಿಕೊಳ್ಳಲು ಆಗುತ್ತಿಲ್ಲ, ಹೊಸ ಕಾನೂನು ಜಾರಿಗೆ ಬಂದಾಗ ಅದರಿಂದ ಹೇಗೆ ತಪ್ಪಿಸಿಕೊಳ್ಳಬೇಕು ಎನ್ನುವಂತಹ ರಿಸರ್ಚ್ ನಡೆಯುತ್ತದೆ. ಕಾನೂನು ಪಾಲನೆಗೆ ಎಲ್ಲರೂ ಆದ್ಯತೆ ನೀಡಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಿದ್ದರು.

ಬೆಂಗಳೂರು ಇಂಟರ್‌ನ್ಯಾಷನಲ್ ಜಸ್ಟಿಸ್ ಮಿಷನ್ ವಿಭಾಗ ಮುಖ್ಯಸ್ಥರಾದ ಪ್ರತಿಮಾ ಎಂ., ಮಾನವ ಕಳ್ಳ ಸಾಗಾಣಿಕೆಗೆ ವಿದ್ಯಾರ್ಥಿಗಳು ತೆಗೆದು ಕೊಳ್ಳಬೇಕಾದ ಕ್ರಮ ದ ಬಗ್ಗೆ ಜಾಗೃತಿ ಮೂಡಿಸಿದರು.


ವಿಶ್ವವಿದ್ಯಾಲಯ ಕಾಲೇಜ್‌ನ ಪ್ರಿನ್ಸಿಪಾಲ್ ಡಾ.ಅನಸೂಯ ರೈ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಇಂಚರ ಫೌಂಡೇಶನ್ ಯೋಗೀಶ್ ಮಲ್ಲಿಗೆ ಮಾಡು ಪುನರ್ವಸತಿಯ ಬಗ್ಗೆ ಮಾಹಿತಿ ನೀಡಿದರು.


ಎ. ಎಚ್. ಟಿ. ಸಿ. ಚೇರ್ಮ್ಯಾನ್ ಪ್ರೋ.ಜಯರಾಜ್ ಅಮೀನ್ ಸ್ವಾಗತಿಸಿದರು. ಡಾ.ಗಾಯತ್ರಿ ನಿರೂಪಿಸಿದರು. ಎ.ಎಚ್.ಟಿ.ಸಿ. ಸದಸ್ಯ ಕಾರ್ಯದರ್ಶಿ ಡಾ.ನಾಗರತ್ನ ಕೆ.ಎ.ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು