10:22 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರು: ವಾಹನ ಸಂಚಾರಕ್ಕೆ ನಿಷೇಧ; ಯಾವ ರಸ್ತೆ? ಕಾರಣ ಏನು? ಪರ್ಯಾಯ ಮಾರ್ಗ ವ್ಯವಸ್ಥೆ ಯಾವುದು?

14/09/2021, 09:04

ಮಂಗಳೂರು (reporterkarnataka.com.): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನವಭಾರತ ಜಂಕ್ಷನ್‍ನಿಂದ ನಾಗರಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸುವುದರೊಂದಿಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗದ ವ್ಯವಸ್ಥೆ ಮಾಡಬೇಕಾದ ಅವಶ್ಯಕತೆ ಇರುವುದನ್ನು ಮನಗಂಡು ಕಾಮಗಾರಿ ಮುಕ್ತಾಯವಾಗುವ ವರೆಗೆ ಮಂಗಳೂರಿನ ಪೊಲೀಸ್ ಆಯುಕ್ತ ಹಾಗೂ ಅಡಿಷನಲ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಶಶಿಕುಮಾರ್  ಅವರು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳು 1989 ರ ನಿಯಮ 221 ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನವಭಾರತ ಜಂಕ್ಷನ್‍ನಿಂದ ನಾಗನಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಇದೇ ಸೆಪ್ಟೆಂಬರ್ 9 ರಿಂದ ನವೆಂಬರ್ 7 ರವರೆಗೆ 60 ದಿನಗಳ ಕಾಲ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. 

ನಾಗನಕಟ್ಟೆ ಕಡೆಯಿಂದ ಬರುವ ವಾಹನಗಳು ಗದ್ದಕೇರಿ ಜಂಕ್ಷನ್ ಮೂಲಕ ಮುಂದುವರೆದು ರಮಣ ಪೈ ಹಾಲ್ ಸಮೀಪದ ರಸ್ತೆಯಲ್ಲಿ ಬಂದು ನವಭಾರತ್ ಸರ್ಕಲ್ ಮುಖಾಂತರ ಸಂಚರಿಸುವುದು.
ನವಭಾರತ್ ಜಂಕ್ಷನ್‍ನಿಂದ ಡೊಂಗರಕೇರಿಗೆ ಹೋಗುವ ವಾಹನಗಳು ರಮಣ ಪೈ ಹಾಲ್ ಮೂಲಕ ಗದ್ದೆಕೇರಿ ಜಂಕನ್ ಕಡೆಗೆ ಸಂಚರಿಸುವುದು.
ಕಾಮಗಾರಿ ವೇಳೆ ನವಭಾರತ ಜಂಕ್ಷನ್ ನಿಂದ ನಾಗನಕಟ್ಟೆ ವರೆಗೆ (ಡೊಂಗರಗೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. 

ಈ ಆದೇಶದನ್ವಯ ಈ ರಸ್ತೆಯಲ್ಲಿ ಅವಶ್ಯವುಳ್ಳ ಸೂಚನಾ ಫಲಕಗಳನ್ನು ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸುವುದು ಹಾಗೂ ಸುಗಮ ಸಂಚಾರ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಂಗಳೂರು ಉಪ ವಿಭಾಗದ ಮಂಗಳೂರು ಸಂಚಾರ ಸಹಾಯಕ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಇತ್ತೀಚಿನ ಸುದ್ದಿ

ಜಾಹೀರಾತು