3:29 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

Mangaluru | ರಚನಾ ಪ್ರಶಸ್ತಿ ಪುರಸ್ಕೃತ ಶೋಭಾ ಮೆಂಡೋನ್ಸಾಗೆ ವಾಮಂಜೂರು ಚರ್ಚ್ ನಿಂದ ಅಭಿನಂದನೆ

08/10/2025, 14:14

ಮಂಗಳೂರು(reporterkarnataka.com): ರಚನಾ – ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಚನಾ ಅತ್ಯುತ್ತಮ ಮಹಿಳೆ 2025 ( Rachana Outstanding Woman Award 2025) ಪ್ರಶಸ್ತಿ ಪುರಸ್ಕೃತೆ ಶೋಭಾ ಮೆಂಡೋನ್ಸಾ ಅವರನ್ನು ವಾಮಂಜೂರು ಚರ್ಚಿನ ಪ್ರಧಾನ ಧರ್ಮಗುರು ವಂದನೀಯ ಫಾ. ಜೇಮ್ಸ್ ಡಿ ಸೋಜಾ ಅವರು ಭಕ್ತಾದಿಗಳ ಸಮ್ಮುಖದಲ್ಲಿ ಹೂಗುಚ್ಛ ನೀಡಿ ಅಭಿನಂದಿಸಿದರು.

ಚರ್ಚ್ ಉಪಾಧ್ಯಕ್ಷ ಚಾರ್ಲ್ಸ್ ಪಾಯ್ಸ್ ಮಾತನಾಡಿ ಶೋಭಾ ಮೆಂಡೋನ್ಸಾ ಅವರು ವಾಮಂಜೂರು ಚರ್ಚ್ ಸಮುದಾಯಕ್ಕೆ ನೀಡಿರುವ ದೇಣಿಗೆಯನ್ನು ಹಾಗೂ ವಿದೇಶದಲ್ಲಿ ಅವರು ನಡೆಸುವ ಉದ್ಯಮದ ಮೂಲಕ ಸಮಾಜಕ್ಕೆ ನೀಡುತ್ತಿರುವ ಕೊಡುಗೆಗಳನ್ನು ಸ್ಮರಿಸಿ ಅಭಿನಂದಿಸಿದರು. ವಿಶೇಷವಾಗಿ 2007ರಲ್ಲಿ ಕುಟುಂಬದ ಸದಸ್ಯರೊಂದಿಗೆ ಸೇರಿ ‘ಮೆಂಡೋನ್ಸಾ ಎಜ್ಯುಕೇಶನಲ್ ಫಂಡ್’ ಸ್ಥಾಪಿಸಿ ಸಮುದಾಯದ ಮಕ್ಕಳ ಶಿಕ್ಷಣಕ್ಕೆ ಸಹಾಯ ಧನ ನೀಡಿರುವುದಕ್ಕಾಗಿ ಹಾಗೂ ಇಲ್ಲಿ ಹಮ್ಮಿಕೊಂಡಿರುವ ಹತ್ತು ಹಲವು ಅಭಿವೃದ್ಧಿ ಕಾರ್ಯಗಳಿಗೆ ಅವರು ಮತ್ತು ಮೆಂಡೋನ್ಸಾ ಕುಟುಂಬದ ಸದಸ್ಯರು ನೀಡಿರುವ ದೇಣಿಗೆಗಳಿಗಾಗಿ ಅವರ ಉಪಕಾರ ಸ್ಮರಿಸಿದರು.
ಕಾಕತಾಳೀಯ ಎಂಬಂತೆ 2009 ರಲ್ಲಿ ಅವರ ಪತಿ ಜೇಮ್ಸ್ ಮೆಂಡೋನ್ಸಾ ಅವರಿಗೆ ರಚನಾ- ಅತ್ಯುತ್ತಮ ಅನಿವಾಸಿ ಭಾರತೀಯ ಪ್ರಶಸ್ತಿ – 2009 ನೀಡಿ ಗೌರವಿಸಲಾಗಿದ್ದ ಸಂದರ್ಭವನ್ನು ನೆನಪಿಸಿ ಅವರಿಗೂ ಅಭಿನಂದನೆ ಸಲ್ಲಿಸಿ ಚರ್ಚ್ ಪ್ರಧಾನ ಧರ್ಮಗುರುಗಳು ಹೂ ಗುಚ್ಛ ನೀಡಿ ಗೌರವಿಸಿದರು. ಚರ್ಚ್ ನ ಸಹಾಯಕ ಧರ್ಮ ಗುರು ವಂದನೀಯ ಫಾ. ಜೀವನ್ ಶೈಲೇಶ್ ಲೋಬೊ, ಚರ್ಚ್ ಪಾಲನಾ ಸಮಿತಿಯ ಕಾರ್ಯದರ್ಶಿ ಸಿ. ಎ. ಲೋವೆಲ್ ಮೊಂತೇರೊ, 21 ಆಯೋಗಗಳ ಸಂಯೋಜಕ ಅನಿಲ್ ಪಿಂಟೊ, ಧರ್ಮ ಭಗಿನಿಯರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು