8:46 PM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಮಂಗಳೂರು: ವಿಎಚ್ ಪಿ, ಭಜರಂಗದಳದಿಂದ ಸಂಭ್ರಮದ ಗೋ ಪೂಜೆ

07/11/2021, 10:07

ಮಂಗಳೂರು(reporterkarnataka.com): ವಿಶ್ವ ಹಿಂದೂ ಪರಿಷತ್, ಬಜರಂಗದಳ, ದುರ್ಗಾವಾಹಿನಿ ಚಕ್ರಪಾಣಿ ಶಾಖೆ ಅತ್ತಾವರ ಹಾಗೂ ಮಾರುತಿ ಸೇವಾ ಸಮಿತಿ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಶಾಸಕ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿ ಪೂಜೆ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಭಾರತದಲ್ಲಿ ಗೋವಿಗೆ ಮಹತ್ತರವಾದ ಸ್ಥಾನವಿದೆ. ಸಕಲ ಜೀವಿಗಳಲ್ಲೂ ಭಗವಂತನನ್ನು ಕಾಣುವ ಹಿಂದೂ ಧರ್ಮದಲ್ಲಿ ಗೋವಿಗೆ ಮಾತೆಯ ಸ್ಥಾನ ನೀಡಿದ್ದೇವೆ. ಅದರ ರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಹೇಳಿದರು. 

ಈ ಸಂದರ್ಭದಲ್ಲಿ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ನಿತಿನ್ ಕುಮಾರ್, ಪಾಲಿಕೆ ಸದಸ್ಯರಾದ ಶೈಲೇಶ್ ಶೆಟ್ಟಿ ಅತ್ತಾವರ, ಭರತ್ ಕುಮಾರ್,ರಂಗನಾಥ್ ಕಿಣಿ ನಿಕಟಪೂರ್ವ ಸದಸ್ಯರು ಮಹಾನಗರ ಪಾಲಿಕೆ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ ಮೆಂಡನ್, ಬಜರಂಗದಳ ಜಿಲ್ಲಾ ಸಂಚಾಲಕರಾದ ಪುನೀತ್ ಅತ್ತಾವರ, ಜಿಲ್ಲಾ ಸೇವಾ ಪ್ರಮುಖರಾದ ಪ್ರವೀಣ್ ಕುತ್ತಾರ್,ಮನೋಜ್ ಕುಮಾರ್ (ಸಂಗಮ್ ಎಂಟರ್ಪ್ರೈಸಸ್), ಆಶಾ ಬೋಪಣ್ಣ, (ಅಧ್ಯಕ್ಷರು ಹಾಗೂ ಕಾರ್ಯಕರ್ತರು ವಿಶ್ವ ಹಿಂದೂ ಪರಿಷತ್ ಬಜರಂಗದಳ ದುರ್ಗವಾಹಿನಿ ಮಾರುತಿ ಸೇವಾ ಸಮಿತಿ ಚಕ್ರಪಾಣಿ ಶಾಖೆ) ಹಾಗೂ ಇತರರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು