7:01 PM Friday20 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಮಂಗಳೂರಿನ ವಿದ್ವತ್ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ; ವಿನೂತನ ಕಾರ್ಯಾಗಾರ

15/08/2024, 20:16

ಮಂಗಳೂರು(reporterkarnataka.com):ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡ ಅವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.
ನಂತರ ವಿದ್ವತ್ ಪಿಯು ಕಾಲೇಜಿನ ತನ್ನ ಪ್ರಪ್ರಥಮ
ಸ್ವಾತಂತ್ರ್ಯ ದಿನಾಚರಣೆಯನ್ನ ಸ್ಮರಣೀಯ ಮಾಡಲು “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿತ್ತು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿತ್ತು. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಿದರು. ಈ ಅಪರೂಪದ ಕಾರ್ಯಾಗಾರಕ್ಕೆ 7 ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂವಾದ ಕಾರ್ಯಗಾರದಲ್ಲಿ ಉತ್ತಮ ಪ್ರಶ್ನೆ ಕೇಳಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಈ ಅರ್ಥಪೂರ್ಣ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು