7:54 AM Monday27 - July 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ

ಇತ್ತೀಚಿನ ಸುದ್ದಿ

ಮಂಗಳೂರಿನ ವಿದ್ವತ್ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ; ವಿನೂತನ ಕಾರ್ಯಾಗಾರ

15/08/2024, 20:16

ಮಂಗಳೂರು(reporterkarnataka.com):ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಅವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು. ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡ ಅವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.
ನಂತರ ವಿದ್ವತ್ ಪಿಯು ಕಾಲೇಜಿನ ತನ್ನ ಪ್ರಪ್ರಥಮ
ಸ್ವಾತಂತ್ರ್ಯ ದಿನಾಚರಣೆಯನ್ನ ಸ್ಮರಣೀಯ ಮಾಡಲು “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.
ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿತ್ತು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿತ್ತು. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಿದರು. ಈ ಅಪರೂಪದ ಕಾರ್ಯಾಗಾರಕ್ಕೆ 7 ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂವಾದ ಕಾರ್ಯಗಾರದಲ್ಲಿ ಉತ್ತಮ ಪ್ರಶ್ನೆ ಕೇಳಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಈ ಅರ್ಥಪೂರ್ಣ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು