10:49 PM Monday9 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ದುರಂತ ಸ್ಮಾರಕ ದಲ್ಲಿ ಜಿಲ್ಲಾಡಳಿತದಿಂದ ಶ್ರದ್ಧಾಂಜಲಿ: ಮಡಿದವರಿಗೆ ನಮನ

22/05/2024, 20:34

ಮಂಗಳೂರು(reporterkarnataka.com): ದೇಶದ ಜನರನ್ನು ಬೆಚ್ಚಿ ಬೀಳಿಸಿದ ಮಂಗಳೂರು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ದುರಂತ ಸಂಭವಿಸಿ ಇದೀಗ 14 ವರ್ಷ ತುಂಬುತ್ತಿದೆ. ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದೆ. ಇಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾಡಳಿತ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನೇತೃತ್ವದಲ್ಲಿ ಪುಷ್ಪ ಗುಚ್ಛ ಇರಿಸಿ ಶ್ರದ್ಧಾಂಜಲಿ ಸಲ್ಲಿಸಿದರು.

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ಚಾಲಕನ ಲೆಕ್ಕಾಚಾರ ತಪ್ಪಿ ಮಿತಿಗಿಂತ ಸ್ವಲ್ಪ ಮೀಟರ್‌ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಟರ್ಮಿನಲ್ ಬಳಿ ಕೆಂಜಾರಿನ ಕಡಿದಾದ ಗುಡ್ಡದಿಂದ ಕೆಳಗೆ ಉರುಳಿತ್ತು ಬೆಂಕಿ ಹತ್ತಿ ಕೊಂಡ ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸಹಿತ 158 ಮಂದಿ ಮೃತರಾಗಿದ್ದರು. ಈ ಪೈಕಿ 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬ್ಬಂದಿ ಸೇರಿ 166 ಮಂದಿ ಪ್ರಯಾಣಿಸುತ್ತಿದ್ದರು.ಅಪಘಾತದಲ್ಲಿ ಬದುಕುಳಿದವರು 8 ಮಂದಿ ಮಾತ್ರ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ , ಮಂಗ ಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್,ಸಂತ್ರಸ್ತರ ಕುಟುಂಬದ ಸದಸ್ಯರಾದ ಶೊಭಾ ಶೆಟ್ಟಿ, ಶ್ರೇಯ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು