12:28 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ವಿಭಜನೆ: ಶೀಘ್ರದಲ್ಲೇ ಕೊಡಗು ವಿವಿ ಅಸ್ತಿತ್ವಕ್ಕೆ

26/09/2022, 23:18

ಮಂಗಳೂರು(reporterkarnataka.com):ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ವಿಭಜನೆಯಾಗಲಿದೆ. ಕೊಡಗು ಜಿಲ್ಲೆಯ ಮಂಗಳೂರು ವಿವಿ ವ್ಯಾಪ್ತಿಯಿಂದ ಹೊರಗುಳಿಯಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರ್ಪಡೆಯಾಗಲಿದೆ.

ಇದೀಗ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಅಸ್ತಿತ್ವದಲ್ಲಿದೆ.

ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿವಿಗೆ ಸೇರಲಿದೆ.

ಮಂಗಳೂರು ವಿವಿಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದೆ. ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿವಿಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿವಿ ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ ಕಾಲೇಜು, ಸಂಯೋಜಿತ ಕಾಲೇಜು, ಸ್ನಾತಕೋತ್ತರ, ಸಂಶೋಧನ ಕೇಂದ್ರವು ಮಂಗಳೂರು ವಿವಿಯಿಂದ ಹೊರಗುಳಿಯಲಿವೆ.

ಕೊಡಗು ಜಿಲ್ಲೆಯಲ್ಲಿರುವ ಕಾಲೇಜುಗಳವರು ವಿಶ್ವವಿದ್ಯಾನಿಲಯಕ್ಕೆ ಹೋಗ ಬೇಕೆಂದರೆ 100 ಕಿ.ಮೀ.ಗೂ ಅಧಿಕ ದೂರದಲ್ಲಿರುವ ಮಂಗಳೂರಿಗೆ ಆಗಮಿಸಬೇಕು. ಪರೀಕ್ಷೆ-ಮೌಲ್ಯಮಾಪನಕ್ಕೂ ಉಪನ್ಯಾಸಕರು ಅತ್ತಿಂದಿತ್ತ ತೆರಳಬೇಕು. ಆ ಹಿನ್ನೆಲೆಯಲ್ಲಿ ಮಡಿಕೇರಿ ಭಾಗಕ್ಕೆ ಪ್ರತ್ಯೇಕವಿ.ವಿ. ಬೇಕೆಂದು ಶಾಸಕ ಅಪ್ಪಚ್ಚು ರಂಜನ್‌ ಆಗ್ರಹಿಸಿದ್ದರಿಂದ 2 ವರ್ಷದ ಹಿಂದೆ ಕೊಡಗು ವಿವಿ ಎಂಬ ಹೊಸ ವಿವಿ ಸ್ಥಾಪನೆಗೆ ಚಿಂತಿಸಲಾಗಿತ್ತು.

ವಿಶಾಲ ವ್ಯಾಪ್ತಿ ಹಾಗೂ ಯೋಗ್ಯ ನಿವೇಶನವಿರುವುದರಿಂದ ಚಿಕ್ಕಳುವಾರದ ಲ್ಲಿರುವ ಮಂಗಳೂರು ವಿವಿ ಸ್ನಾತಕೋತ್ತರ ಹಾಗೂ ಸಂಶೋಧನ ಕೇಂದ್ರವು ಇನ್ನು ಮುಂದೆ ಕೊಡಗು ವಿವಿ ಕ್ಯಾಂಪಸ್‌ ಆಗುವ ಎಲ್ಲ ಸಾಧ್ಯತೆಗಳಿವೆ. ವಿಧಾನಸಭಾ ಅಧಿವೇಶನ ಮುಗಿದ ಅನಂತರ ಉನ್ನತ ಶಿಕ್ಷಣ ಇಲಾಖೆಯು ವಿಶೇಷ ಅಧಿಕಾರಿಯನ್ನು ಇಲ್ಲಿಗೆ ನಿಯೋಜಿಸುವ ಮೂಲಕ ಹೊಸ ವಿವಿ ಸ್ಥಾಪನೆಗೆ ಎಲ್ಲ ಸಿದ್ಧತೆ ಆರಂಭಿಸುವ ಬಗ್ಗೆ ಮಾಹಿತಿ ಲಯಿದೆ. ಈ ಮಧ್ಯೆ ಮಂಗಳೂರು ವಿವಿ ಅಧೀನದಲ್ಲಿರುವ ವಿವಿಧ ಅಧ್ಯಯನ ಪೀಠ ಹಾಗೂ ಕೊಡಗಿನಲ್ಲಿ ಕರ್ತವ್ಯ ನಿರ್ವಹಿಸುವ ಸಿಬಂದಿಯ ಕಾರ್ಯನಿರ್ವಹಣೆ ಬಗ್ಗೆ ಇನ್ನಷ್ಟೇ ಪ್ರಕ್ರಿಯೆ ನಡೆಯಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು