12:03 AM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಭರ್ಜರಿ ಗೆಲುವು

09/11/2024, 22:30

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಭರ್ಜರಿ ಗೆಲುವು ಸಾಧಿಸಿದೆ.


ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸುಮಾರು 16 ವರ್ಷಗಳಿಂದ ಗೆಲುವು ಸಾಧಿಸಿಕೊಂಡು ಬಂದಿರುವ ವಿದ್ಯಾರ್ಥಿ ಪರಿಷತ್ ಇಂದು ಕೂಡ ಗೆಲುವಿನ ನಗೆ ಬೀರಿದೆ.
ಕಳೆದ ಮೂರು ವರ್ಷಗಳಿಂದ 32 ತರಗತಿ ಅಭ್ಯರ್ಥಿಗಳಲ್ಲಿ ಗೆಲುವು ಸಾಧಿಸಿಕೊಂಡು ಬಂದಿದ್ದು, ಈ ಬಾರಿ 33 ಸ್ಥಾನಗಳಲ್ಲಿ 33 ಸ್ಥಾನಗಳನ್ನು ಕೂಡಾ ವಿದ್ಯಾರ್ಥಿ ಪರಿಷತ್ ಪರವಾಗಿ ಗೆದ್ದು ಕೊಂಡಿದೆ.
ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಸಾತ್ವಿಕ್ , ಕಾರ್ಯದರ್ಶಿಯಾಗಿ ಕೀರ್ತನ್ , ಸಹ ಕಾರ್ಯದರ್ಶಿಯಾಗಿ ನಂದಿತಾ ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾ ಶೆಟ್ಟಿ, ಸಾಂಸ್ಕೃತಿಕ ಸಹ ಕಾರ್ಯದರ್ಶಿಯಾಗಿ ಅನನ್ಯ ಇವರುಗಳು ಜವಾಬ್ದಾರಿ ಸ್ವೀಕರಿಸಿದರು.
ಚುನಾವಣಾ ಪ್ರಕ್ರಿಯೆಯ ನಂತರದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ತರಗತಿ ನಾಯಕರುಗಳು ಸೇರಿ ಮಂಗಳೂರಿನ ಪ್ರಮುಖ ಬೀದಿಗಳಲ್ಲಿ ವಿಜಯಾತ್ರೆ ನಡೆಸಿ ಮೆರವಣಿಗೆ ಪುರಭವನದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ಪ್ರತೀಕ್ ಬಂಟ್ವಾಳ , ಮಂಗಳೂರು ಮಹಾನಗರ ಕಾರ್ಯದರ್ಶಿಗಳಾದ ಮೋನಿಶ್ ತುಮಿನಾಡು ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಮರಾಠಿ ಮತ್ತು ವಿದ್ಯಾರ್ಥಿನಿ ವಿಸ್ತಾರಕ್ ಆದ ಶ್ರೀ ಲಕ್ಷ್ಮೀ‌ ಹಾಗೂ ಮಂಗಳಗೌರಿ ಯು.ಸಿ.ಎಂ ಕಾಲೇಜು ಘಟಕದ ಅಧ್ಯಕ್ಷ ನಿಖಿತ್ ಹಾಗೂ ಶಾಶಂಕ್, ಹಿತೇಶ್ ಮತ್ತು ಮಂಗಳೂರು ಮಹಾನಗರದ ಪ್ರಮುಖರು ಸೇರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು