7:27 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಭರ್ಜರಿ ಗೆಲುವು

09/11/2024, 22:30

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಭರ್ಜರಿ ಗೆಲುವು ಸಾಧಿಸಿದೆ.


ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸುಮಾರು 16 ವರ್ಷಗಳಿಂದ ಗೆಲುವು ಸಾಧಿಸಿಕೊಂಡು ಬಂದಿರುವ ವಿದ್ಯಾರ್ಥಿ ಪರಿಷತ್ ಇಂದು ಕೂಡ ಗೆಲುವಿನ ನಗೆ ಬೀರಿದೆ.
ಕಳೆದ ಮೂರು ವರ್ಷಗಳಿಂದ 32 ತರಗತಿ ಅಭ್ಯರ್ಥಿಗಳಲ್ಲಿ ಗೆಲುವು ಸಾಧಿಸಿಕೊಂಡು ಬಂದಿದ್ದು, ಈ ಬಾರಿ 33 ಸ್ಥಾನಗಳಲ್ಲಿ 33 ಸ್ಥಾನಗಳನ್ನು ಕೂಡಾ ವಿದ್ಯಾರ್ಥಿ ಪರಿಷತ್ ಪರವಾಗಿ ಗೆದ್ದು ಕೊಂಡಿದೆ.
ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಸಾತ್ವಿಕ್ , ಕಾರ್ಯದರ್ಶಿಯಾಗಿ ಕೀರ್ತನ್ , ಸಹ ಕಾರ್ಯದರ್ಶಿಯಾಗಿ ನಂದಿತಾ ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾ ಶೆಟ್ಟಿ, ಸಾಂಸ್ಕೃತಿಕ ಸಹ ಕಾರ್ಯದರ್ಶಿಯಾಗಿ ಅನನ್ಯ ಇವರುಗಳು ಜವಾಬ್ದಾರಿ ಸ್ವೀಕರಿಸಿದರು.
ಚುನಾವಣಾ ಪ್ರಕ್ರಿಯೆಯ ನಂತರದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ತರಗತಿ ನಾಯಕರುಗಳು ಸೇರಿ ಮಂಗಳೂರಿನ ಪ್ರಮುಖ ಬೀದಿಗಳಲ್ಲಿ ವಿಜಯಾತ್ರೆ ನಡೆಸಿ ಮೆರವಣಿಗೆ ಪುರಭವನದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ಪ್ರತೀಕ್ ಬಂಟ್ವಾಳ , ಮಂಗಳೂರು ಮಹಾನಗರ ಕಾರ್ಯದರ್ಶಿಗಳಾದ ಮೋನಿಶ್ ತುಮಿನಾಡು ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಮರಾಠಿ ಮತ್ತು ವಿದ್ಯಾರ್ಥಿನಿ ವಿಸ್ತಾರಕ್ ಆದ ಶ್ರೀ ಲಕ್ಷ್ಮೀ‌ ಹಾಗೂ ಮಂಗಳಗೌರಿ ಯು.ಸಿ.ಎಂ ಕಾಲೇಜು ಘಟಕದ ಅಧ್ಯಕ್ಷ ನಿಖಿತ್ ಹಾಗೂ ಶಾಶಂಕ್, ಹಿತೇಶ್ ಮತ್ತು ಮಂಗಳೂರು ಮಹಾನಗರದ ಪ್ರಮುಖರು ಸೇರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು