5:19 PM Tuesday4 - August 2026
ಬ್ರೇಕಿಂಗ್ ನ್ಯೂಸ್
*10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!!

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಎಬಿವಿಪಿ ಭರ್ಜರಿ ಗೆಲುವು

09/11/2024, 22:30

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಭರ್ಜರಿ ಗೆಲುವು ಸಾಧಿಸಿದೆ.


ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಸುಮಾರು 16 ವರ್ಷಗಳಿಂದ ಗೆಲುವು ಸಾಧಿಸಿಕೊಂಡು ಬಂದಿರುವ ವಿದ್ಯಾರ್ಥಿ ಪರಿಷತ್ ಇಂದು ಕೂಡ ಗೆಲುವಿನ ನಗೆ ಬೀರಿದೆ.
ಕಳೆದ ಮೂರು ವರ್ಷಗಳಿಂದ 32 ತರಗತಿ ಅಭ್ಯರ್ಥಿಗಳಲ್ಲಿ ಗೆಲುವು ಸಾಧಿಸಿಕೊಂಡು ಬಂದಿದ್ದು, ಈ ಬಾರಿ 33 ಸ್ಥಾನಗಳಲ್ಲಿ 33 ಸ್ಥಾನಗಳನ್ನು ಕೂಡಾ ವಿದ್ಯಾರ್ಥಿ ಪರಿಷತ್ ಪರವಾಗಿ ಗೆದ್ದು ಕೊಂಡಿದೆ.
ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಸಾತ್ವಿಕ್ , ಕಾರ್ಯದರ್ಶಿಯಾಗಿ ಕೀರ್ತನ್ , ಸಹ ಕಾರ್ಯದರ್ಶಿಯಾಗಿ ನಂದಿತಾ ಎಸ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪೂಜಾ ಶೆಟ್ಟಿ, ಸಾಂಸ್ಕೃತಿಕ ಸಹ ಕಾರ್ಯದರ್ಶಿಯಾಗಿ ಅನನ್ಯ ಇವರುಗಳು ಜವಾಬ್ದಾರಿ ಸ್ವೀಕರಿಸಿದರು.
ಚುನಾವಣಾ ಪ್ರಕ್ರಿಯೆಯ ನಂತರದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ತರಗತಿ ನಾಯಕರುಗಳು ಸೇರಿ ಮಂಗಳೂರಿನ ಪ್ರಮುಖ ಬೀದಿಗಳಲ್ಲಿ ವಿಜಯಾತ್ರೆ ನಡೆಸಿ ಮೆರವಣಿಗೆ ಪುರಭವನದಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಮಂಗಳೂರು ಜಿಲ್ಲಾ ಸಹ ಸಂಚಾಲಕರಾದ ಪ್ರತೀಕ್ ಬಂಟ್ವಾಳ , ಮಂಗಳೂರು ಮಹಾನಗರ ಕಾರ್ಯದರ್ಶಿಗಳಾದ ಮೋನಿಶ್ ತುಮಿನಾಡು ಮಂಗಳೂರು ವಿಭಾಗ ಸಂಘಟನಾ ಕಾರ್ಯದರ್ಶಿ ಚಂದ್ರಶೇಖರ ಮರಾಠಿ ಮತ್ತು ವಿದ್ಯಾರ್ಥಿನಿ ವಿಸ್ತಾರಕ್ ಆದ ಶ್ರೀ ಲಕ್ಷ್ಮೀ‌ ಹಾಗೂ ಮಂಗಳಗೌರಿ ಯು.ಸಿ.ಎಂ ಕಾಲೇಜು ಘಟಕದ ಅಧ್ಯಕ್ಷ ನಿಖಿತ್ ಹಾಗೂ ಶಾಶಂಕ್, ಹಿತೇಶ್ ಮತ್ತು ಮಂಗಳೂರು ಮಹಾನಗರದ ಪ್ರಮುಖರು ಸೇರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು