12:45 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ: ಉನ್ನತ ಶಿಕ್ಷಣ ಸಚಿವರಿಗೆ ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಮನವಿ

13/07/2024, 23:41

ಮಂಗಳೂರು(reporterkarnataka.com): ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ವತಂತ್ರ ತುಳು ಅಧ್ಯಯನ ವಿಭಾಗ ಆರಂಭಿಸಬೇಕೆಂದು ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಅವರು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಸವಾದ್ ಈ ಬೇಡಿಕೆ ಸಲ್ಲಿಸಿದ್ದಾರೆ.ಸ್ಪೀಕರ್ ಯು.ಟಿ.ಖಾದರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಚಿವರು ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸವಾದ್ ಸುಳ್ಯ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಸವಾದ್ ಈ ಹಿಂದೆ ಸಿದ್ದರಾಮಯ್ಯ ಸರಕಾರ ಇರುವಾಗಲೇ 2018-19ರ ಸಾಲಿನಲ್ಲಿ ತುಳು ಎಂಎ ವಿಭಾಗ ಮಂಗಳೂರು ವಿವಿಯಲ್ಲಿ ಆರಂಭಗೊಂಡಿರುವ ಬಗ್ಗೆಯೂ ಸಚಿವರ ಗಮನಕ್ಕೆ ತಂದಿದ್ದಾರೆ. ಆದರೆ, ಸದ್ಯ ತುಳು ಎಂಎ ವಿಭಾಗ ಕನ್ನಡ ಅಧ್ಯಯನ ವಿಭಾಗದಡಿಯಲ್ಲೇ ಇದ್ದು, ಹೀಗಾಗಿ ಸ್ವತಂತ್ರ ಅಸ್ತಿತ್ವ ಸಿಕ್ಕಿಲ್ಲ. ಸ್ವತಂತ್ರ ಅಧ್ಯಯನ ವಿಭಾಗ ರಚನೆ ಸಲುವಾಗಿ ಈಗಾಗಲೇ ಮಂಗಳೂರು ವಿವಿಯಿಂದ ಉನ್ನತ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಹೋಗಿರುವುದನ್ನು ಸವಾದ್ ಅವರು ಸಚಿವರ ಗಮನಕ್ಕೆ ತಂದಿದ್ದಾರೆ.
ಸ್ಪೀಕರ್ ಯುಟಿ ಖಾದರ್ ಈ ಬಗ್ಗೆ ಸ್ಪಂದಿಸಿದ್ದು, ತುಳು ಅಧ್ಯಯನ ವಿಭಾಗ ರಚಿಸುವುದಕ್ಕೆ ಆದ್ಯತೆ ನೀಡುವಂತೆ ಸಚಿವರಿಗೆ ಸೂಚಿಸಿದ್ದಾರೆ. ಅಲ್ಲದೆ, ಆಂಧ್ರಪ್ರದೇಶದ ಕುಪ್ಪಂ ವಿವಿಯಲ್ಲಿ ತುಳು ಅಧ್ಯಯನ ವಿಭಾಗ ಇದೆ. ನಮ್ಮ ತುಳು ಭಾಷಿಕರು ಇರುವಂತಹ ಮಂಗಳೂರು ವಿವಿಯಲ್ಲಿ ತುಳು ಅಧ್ಯಯನ ವಿಭಾಗ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದ್ದಾರೆ.
ಸ್ಪೀಕರ್ ಖಾದರ್ ಮಾಡಿದ ಮನವಿಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಕೂಡಲೇ ತನ್ನ ಕಾರ್ಯದರ್ಶಿ ಮೂಲಕ ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ರವಾನಿಸಿದ್ದಾರೆ. ಈ ಬಗ್ಗೆ ತುರ್ತು ಗಮನಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಸಿಂಡಿಕೇಟ್ ಸದಸ್ಯ ಸವಾದ್ ಸುಳ್ಯ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು