9:01 AM Monday6 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ಫುಡ್ ಫೆಸ್ಟ್: ತುಳುನಾಡಿನ ವಿವಿಧ ಆಹಾರೋತ್ಪನ್ನಗಳ ಪ್ರದರ್ಶನ

19/07/2022, 21:14

ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ವಿಶ್ವವಿದ್ಯಾನಿಲಯ ಕಾಲೇಜಿನ  ಪ್ರವಾಸೋದ್ಯಮ ವಿಭಾಗ ಹಾಗೂ ಕಾಮರ್ಸ್ ವಿಭಾಗದ ವತಿಯಿಂದ ಫುಡ್ ಫೆಸ್ಟ್ ಬಂಜಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬಂಟ್ವಾಳ ಬಂಟ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು, ನಮ್ಮ ಹಿರಿಯರು ಮಾರ್ಗದರ್ಶನ ಮಾಡಿದಂತಹ ಆಹಾರ ಪದ್ಧತಿಗಳು ಔಷಧ ಮೂಲವಾಗಿದೆ. ಯಾವುದೆ ಅಡ್ಡ ಪರಿಣಾಮ ಗಳಿಲ್ಲ. ಪಾಶಿಮಾತ್ಯಾ ಶೈಲಿಯ ಜಂಕ್ ಫುಡ್ ಆರೋಗ್ಯಕ್ಕೆ ಹಾನಿಕಾರಕ. ನಮ್ಮಲ್ಲಿನ ವಿವಿಧ ಬಗೆಯ ಆಹಾರೋತ್ಪನ್ನಗಳು ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಜೀವನದಲ್ಲಿ ವೈಯಕ್ತಿಕ ಉದ್ದಿಮೆ ಮಾಡುವ ನಿಟ್ಟಿನಲ್ಲಿ ಸಹಾಯಕ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ವಹಿಸಿದ್ದರು. ನಂತರ ಮಾತಾಡಿ ಅವರು, ಅಚ್ಚುಕಟ್ಟಾಗಿ ಆಹಾರೋತ್ಪನ್ನ ಗಳಿಗೆ ಶೀರ್ಷಿಕೆ ನೀಡಿ ಈ ವ್ಯವಸ್ಥೆ ಮಾಡಲಾಗಿದೆ. ಐದು ವಿದ್ಯಾರ್ಥಿಕಲಿಕಾ ನಿಟ್ಟಿನಲ್ಲಿ ಪ್ರಯೋಜನ ಕಾರಿ ಎಂದು ಅವರು ನುಡಿದರು.



ಬಿ. ಬಿ.ಎ (ಟಿ. ಟಿ )ವಿಭಾಗ ಮುಖ್ಯಸ್ಥ ಡಾ. ಎ. ಸಿದ್ದಿಕ್, ಬಿ. ಎ (ಟಿ. ಟಿ.ಎಂ)ವಿಭಾಗ ಮುಖ್ಯಸ್ತೆ ಡಾ. ಮೀನಾಕ್ಷಿ ಎಂ. ಎಂ. ಮತ್ತಿರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕರಾದ ಶ್ರೀರಾಜ್,ಪರಿಣಿತ,ಎಚ್.ಆರ್. ಡಿ ವಿಭಾಗ ಉಪನ್ಯಾಸಕಿ ರೋವಿನ ಮತ್ತಿತರರು ಉಪಸ್ಥಿತರಿದ್ದರು.

ಫುಡ್ ಫೆಸ್ಟ್ ನಲ್ಲಿ ತುಳುನಾಡಿನ ಅನೇಕ ಆಹಾರೋತ್ಪನ್ನ ಗಳು ಪ್ರದರ್ಶನ ಗೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು