6:04 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ಫುಡ್ ಫೆಸ್ಟ್: ತುಳುನಾಡಿನ ವಿವಿಧ ಆಹಾರೋತ್ಪನ್ನಗಳ ಪ್ರದರ್ಶನ

19/07/2022, 21:14

ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ವಿಶ್ವವಿದ್ಯಾನಿಲಯ ಕಾಲೇಜಿನ  ಪ್ರವಾಸೋದ್ಯಮ ವಿಭಾಗ ಹಾಗೂ ಕಾಮರ್ಸ್ ವಿಭಾಗದ ವತಿಯಿಂದ ಫುಡ್ ಫೆಸ್ಟ್ ಬಂಜಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬಂಟ್ವಾಳ ಬಂಟ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು, ನಮ್ಮ ಹಿರಿಯರು ಮಾರ್ಗದರ್ಶನ ಮಾಡಿದಂತಹ ಆಹಾರ ಪದ್ಧತಿಗಳು ಔಷಧ ಮೂಲವಾಗಿದೆ. ಯಾವುದೆ ಅಡ್ಡ ಪರಿಣಾಮ ಗಳಿಲ್ಲ. ಪಾಶಿಮಾತ್ಯಾ ಶೈಲಿಯ ಜಂಕ್ ಫುಡ್ ಆರೋಗ್ಯಕ್ಕೆ ಹಾನಿಕಾರಕ. ನಮ್ಮಲ್ಲಿನ ವಿವಿಧ ಬಗೆಯ ಆಹಾರೋತ್ಪನ್ನಗಳು ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಜೀವನದಲ್ಲಿ ವೈಯಕ್ತಿಕ ಉದ್ದಿಮೆ ಮಾಡುವ ನಿಟ್ಟಿನಲ್ಲಿ ಸಹಾಯಕ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ವಹಿಸಿದ್ದರು. ನಂತರ ಮಾತಾಡಿ ಅವರು, ಅಚ್ಚುಕಟ್ಟಾಗಿ ಆಹಾರೋತ್ಪನ್ನ ಗಳಿಗೆ ಶೀರ್ಷಿಕೆ ನೀಡಿ ಈ ವ್ಯವಸ್ಥೆ ಮಾಡಲಾಗಿದೆ. ಐದು ವಿದ್ಯಾರ್ಥಿಕಲಿಕಾ ನಿಟ್ಟಿನಲ್ಲಿ ಪ್ರಯೋಜನ ಕಾರಿ ಎಂದು ಅವರು ನುಡಿದರು.



ಬಿ. ಬಿ.ಎ (ಟಿ. ಟಿ )ವಿಭಾಗ ಮುಖ್ಯಸ್ಥ ಡಾ. ಎ. ಸಿದ್ದಿಕ್, ಬಿ. ಎ (ಟಿ. ಟಿ.ಎಂ)ವಿಭಾಗ ಮುಖ್ಯಸ್ತೆ ಡಾ. ಮೀನಾಕ್ಷಿ ಎಂ. ಎಂ. ಮತ್ತಿರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕರಾದ ಶ್ರೀರಾಜ್,ಪರಿಣಿತ,ಎಚ್.ಆರ್. ಡಿ ವಿಭಾಗ ಉಪನ್ಯಾಸಕಿ ರೋವಿನ ಮತ್ತಿತರರು ಉಪಸ್ಥಿತರಿದ್ದರು.

ಫುಡ್ ಫೆಸ್ಟ್ ನಲ್ಲಿ ತುಳುನಾಡಿನ ಅನೇಕ ಆಹಾರೋತ್ಪನ್ನ ಗಳು ಪ್ರದರ್ಶನ ಗೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು