5:20 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು: ಆ.11ರಂದು ತುಳುನಾಡಿನಲ್ಲಿ ಆಷಾಡ ಮಾಸದ ವೈಶಿಷ್ಟ್ಯ ಸಾರುವ ‘ಆಟಿಡೊಂಜಿ ದಿನ’ 

05/08/2022, 23:19

ಮಂಗಳೂರು(reporterkarnataka.com): ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾ ಘಟಕ, ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜು ಕನ್ನಡ ಸಂಘ ಹಾಗೂ ಮಂಗಳೂರು ವಿವಿಯ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠದ ಆಶ್ರಯದಲ್ಲಿ ತುಳುನಾಡಿನಲ್ಲಿ ಆಷಾಢ ಮಾಸದ ವೈಶಿಷ್ಟ್ಯವನ್ನು ಸಾರುವ ‘ಆಟಿಡೊಂಜಿ ದಿನ’ ಕಾರ್ಯಕ್ರಮ ನಗರದ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಆಗಸ್ಟ್ 11ರಂದು ಬೆಳಗ್ಗೆ 10.30ಕ್ಕೆ ನಡೆಯಲಿದೆ.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ ಉದ್ಘಾಟನೆ ನೆರವೇರಿಸುವರು. ವಿವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಸೂಯ ರೈ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ಮಂಗಳೂರು ವಿವಿ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಂ.ಕೆ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಕಜಾಪ ಕಾಸರಗೋಡು ಜಿಲ್ಲೆ ಅಧ್ಯಕ್ಷ ಎ.ಆರ್. ಸುಬ್ಬಯ್ಯ ಕಟ್ಟೆ ಹಾಗೂ ನ್ಯಾಯವಾದಿ ಮಹಮ್ಮದ್ ಅಸ್ಗರ್ ಭಾಗವಹಿಸಲಿರುವರು. 

ಉಪನ್ಯಾಸಕ ಡಾ. ಅರುಣ್ ಉಳ್ಳಾಲ್ ವಿಶೇಷ ಉಪನ್ಯಾಸ ನೀಡುವರು. ಈ ಸಂದರ್ಭದಲ್ಲಿ ಮಂಗಳೂರು ವಿವಿಯಲ್ಲಿ ಡಾಕ್ಟರೇಟ್ ಪಡೆದ ಡಾ. ಅರುಣ್ ಉಳ್ಳಾಲ್ ಅವರನ್ನು ಸನ್ಮಾನಿಸಲಾಗುವುದು.

ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸವಿ ನೆನಪಿಗಾಗಿ ಅಮೃತ ಭಾರತಿಗೆ ಜಾನಪದದ ಆರತಿ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು