8:59 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು ಹಿಜಾಬ್‌ ನಿಷೇಧ: 15 ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಟಿಸಿ ವಾಪಾಸ್‌

23/06/2022, 00:07

ಮಂಗಳೂರು(reporterkarnataka.com): ಹಿಜಾಬ್‌ ಧರಿಸಲು ಅವಕಾಶ ನೀಡದ ಹಿನ್ನೆಲೆ ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಮುಸ್ಲಿಂ ಯುವತಿಯೊಬ್ಬಳು ಟಿಸಿ ವಾಪಾಸ್‌ ಪಡೆದಿದ್ದಾಳೆ.

ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ 15 ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು, 15 ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಟಿಸಿ ವಾಪಾಸ್‌ ಪಡೆದುಕೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ್ದು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ಸಹ ನಡೆಸಿದ್ದರು.

ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ ಎಸ್ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳು ಆಯಾ ಸಂಸ್ಥೆಗಳು ನಿಗದಿಪಡಿಸಿದ ಡ್ರೆಸ್ ಕೋಡ್‌ಗೆ ಬದ್ಧರಾಗಿರಬೇಕು ಮತ್ತು ಹೈಕೋರ್ಟ್ ನಿರ್ದೇಶನವನ್ನು ಅನುಸರಿಸಬೇಕು. ಬೇರೆ ಕಾಲೇಜ್ ಗುಳಿಗೆ ಸೇರಬಯಸುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಿವಿ ವಿಶೇಷ ವ್ಯವಸ್ಥೆ ಮಾಡಲಿದೆ ಎಂದು ಹೇಳಿದ್ದರು.

ಐವರು ವಿದ್ಯಾರ್ಥಿಗಳು ಟಿಸಿಗಾಗಿ ಮನವಿಯೊಂದಿಗೆ ತಮ್ಮ ಬಳಿಗೆ ಬಂದಿದ್ದರು ಮತ್ತು ತಾವು ಹಿಜಾಬ್ ಅನುಮತಿಸುವ ಇತರ ಕಾಲೇಜುಗಳಿಗೆ ಸೇರಿಕೊಳ್ಳಲು ಟಿಸಿ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕಾಲೇಜು ಪ್ರಿನ್ಸಿಪಾಲ್  ತಿಳಿಸಿದ್ದಾರೆ.

ಆದರೆ ಅವರು ನೀಡಿದ ಪತ್ರಗಳು ಅಪೂರ್ಣವಾಗಿ ಕಂಡುಬಂದಿದ್ದರಿಂದ, ಹೊಸ ಪತ್ರ ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಅವರು ಇನ್ನೂ ಹೊಸ ಪತ್ರಗಳೊಂದಿಗೆ ಬಂದಿಲ್ಲ ಎಂದು 

ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು