12:07 AM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು ಹಿಜಾಬ್‌ ನಿಷೇಧ: 15 ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಟಿಸಿ ವಾಪಾಸ್‌

23/06/2022, 00:07

ಮಂಗಳೂರು(reporterkarnataka.com): ಹಿಜಾಬ್‌ ಧರಿಸಲು ಅವಕಾಶ ನೀಡದ ಹಿನ್ನೆಲೆ ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಮುಸ್ಲಿಂ ಯುವತಿಯೊಬ್ಬಳು ಟಿಸಿ ವಾಪಾಸ್‌ ಪಡೆದಿದ್ದಾಳೆ.

ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ 15 ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು, 15 ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಟಿಸಿ ವಾಪಾಸ್‌ ಪಡೆದುಕೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ್ದು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ಸಹ ನಡೆಸಿದ್ದರು.

ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ ಎಸ್ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳು ಆಯಾ ಸಂಸ್ಥೆಗಳು ನಿಗದಿಪಡಿಸಿದ ಡ್ರೆಸ್ ಕೋಡ್‌ಗೆ ಬದ್ಧರಾಗಿರಬೇಕು ಮತ್ತು ಹೈಕೋರ್ಟ್ ನಿರ್ದೇಶನವನ್ನು ಅನುಸರಿಸಬೇಕು. ಬೇರೆ ಕಾಲೇಜ್ ಗುಳಿಗೆ ಸೇರಬಯಸುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಿವಿ ವಿಶೇಷ ವ್ಯವಸ್ಥೆ ಮಾಡಲಿದೆ ಎಂದು ಹೇಳಿದ್ದರು.

ಐವರು ವಿದ್ಯಾರ್ಥಿಗಳು ಟಿಸಿಗಾಗಿ ಮನವಿಯೊಂದಿಗೆ ತಮ್ಮ ಬಳಿಗೆ ಬಂದಿದ್ದರು ಮತ್ತು ತಾವು ಹಿಜಾಬ್ ಅನುಮತಿಸುವ ಇತರ ಕಾಲೇಜುಗಳಿಗೆ ಸೇರಿಕೊಳ್ಳಲು ಟಿಸಿ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕಾಲೇಜು ಪ್ರಿನ್ಸಿಪಾಲ್  ತಿಳಿಸಿದ್ದಾರೆ.

ಆದರೆ ಅವರು ನೀಡಿದ ಪತ್ರಗಳು ಅಪೂರ್ಣವಾಗಿ ಕಂಡುಬಂದಿದ್ದರಿಂದ, ಹೊಸ ಪತ್ರ ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಅವರು ಇನ್ನೂ ಹೊಸ ಪತ್ರಗಳೊಂದಿಗೆ ಬಂದಿಲ್ಲ ಎಂದು 

ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು