7:38 AM Tuesday1 - September 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು ಹಿಜಾಬ್‌ ನಿಷೇಧ: 15 ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಟಿಸಿ ವಾಪಾಸ್‌

23/06/2022, 00:07

ಮಂಗಳೂರು(reporterkarnataka.com): ಹಿಜಾಬ್‌ ಧರಿಸಲು ಅವಕಾಶ ನೀಡದ ಹಿನ್ನೆಲೆ ಮಂಗಳೂರು ಯೂನಿವರ್ಸಿಟಿ ಕಾಲೇಜಿನಿಂದ ಮುಸ್ಲಿಂ ಯುವತಿಯೊಬ್ಬಳು ಟಿಸಿ ವಾಪಾಸ್‌ ಪಡೆದಿದ್ದಾಳೆ.

ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ 15 ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದರು, 15 ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಟಿಸಿ ವಾಪಾಸ್‌ ಪಡೆದುಕೊಂಡಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ಹಿಜಾಬ್ ನಿಷೇಧದ ಹಿನ್ನೆಲೆಯಲ್ಲಿ ನಗರದ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಬೇರೆ ಕಾಲೇಜುಗಳಿಗೆ ಸೇರಲು ವರ್ಗಾವಣೆ ಪ್ರಮಾಣಪತ್ರ(ಟಿಸಿ) ನೀಡುವಂತೆ ಕಾಲೇಜು ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.

ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿದ್ದು, ಇದರ ವಿರುದ್ಧ ಮುಸ್ಲಿಂ ವಿದ್ಯಾರ್ಥಿಗಳು ಪ್ರತಿಭಟನೆ ಸಹ ನಡೆಸಿದ್ದರು.

ಇತ್ತೀಚೆಗಷ್ಟೇ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ ಎಸ್ ಯಡಪಡಿತ್ತಾಯ ಅವರು, ವಿದ್ಯಾರ್ಥಿಗಳು ಆಯಾ ಸಂಸ್ಥೆಗಳು ನಿಗದಿಪಡಿಸಿದ ಡ್ರೆಸ್ ಕೋಡ್‌ಗೆ ಬದ್ಧರಾಗಿರಬೇಕು ಮತ್ತು ಹೈಕೋರ್ಟ್ ನಿರ್ದೇಶನವನ್ನು ಅನುಸರಿಸಬೇಕು. ಬೇರೆ ಕಾಲೇಜ್ ಗುಳಿಗೆ ಸೇರಬಯಸುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ವಿವಿ ವಿಶೇಷ ವ್ಯವಸ್ಥೆ ಮಾಡಲಿದೆ ಎಂದು ಹೇಳಿದ್ದರು.

ಐವರು ವಿದ್ಯಾರ್ಥಿಗಳು ಟಿಸಿಗಾಗಿ ಮನವಿಯೊಂದಿಗೆ ತಮ್ಮ ಬಳಿಗೆ ಬಂದಿದ್ದರು ಮತ್ತು ತಾವು ಹಿಜಾಬ್ ಅನುಮತಿಸುವ ಇತರ ಕಾಲೇಜುಗಳಿಗೆ ಸೇರಿಕೊಳ್ಳಲು ಟಿಸಿ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ ಎಂದು ಕಾಲೇಜು ಪ್ರಿನ್ಸಿಪಾಲ್  ತಿಳಿಸಿದ್ದಾರೆ.

ಆದರೆ ಅವರು ನೀಡಿದ ಪತ್ರಗಳು ಅಪೂರ್ಣವಾಗಿ ಕಂಡುಬಂದಿದ್ದರಿಂದ, ಹೊಸ ಪತ್ರ ನೀಡುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಅವರು ಇನ್ನೂ ಹೊಸ ಪತ್ರಗಳೊಂದಿಗೆ ಬಂದಿಲ್ಲ ಎಂದು 

ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು