8:17 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕೊಂಕಣಿ ಅಧ್ಯಯನ ಪೀಠ: 2021- 22ನೇ ಸಾಲಿನ ಕಾರ್ಯಯೋಜನೆ ಅನುಷ್ಠಾನ ಸಭೆ

07/11/2021, 19:58

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠದ 2021-22ರ ಸಾಲಿನ ಕಾರ್ಯಯೋಜನೆಯನ್ನು ಅನುಷ್ಠಾನಗೊಳಿಸುವುದರ ಸಲುವಾಗಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ ಉಪನ್ಯಾಸಕರ ಸಭೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರೆಯಲಾಗಿತ್ತು. ಸದ್ರಿ ಸಭೆಯಲ್ಲಿ ಕೊಂಕಣಿ ಅಧ್ಯಯನ ಪೀಠದ ಸವಿಸ್ತಾರ ಮಾಹಿತಿಯನ್ನು ಪೀಠದ ಸಂಯೋಜಕ ಡಾ.ಜಯವಂತ ನಾಯಕ್ ನೀಡಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ಕಾಲೇಜುಗಳಲ್ಲಿ ಕೊಂಕಣಿ ಸಾಹಿತ್ಯ, ಸಂಸ್ಕೃತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಸಂಘಟಿಸುವ ಕುರಿತು ತೀರ್ಮಾನಿಸಲಾಯಿತು. ಅದೇ ರೀತಿ ವಿವಿಧ ಕಾಲೇಜುಗಳಲ್ಲಿ ವಿಶೇಷ ಉಪನ್ಯಾಸ, ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ ಕ್ಲಬ್ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಅದಲ್ಲದೇ, ಕೊಂಕಣಿ ಸ್ನಾತಕೋತ್ತರ ಪದವಿಯ ಕುರಿತು ಸಂಯೋಜಕ ದೇವದಾಸ ಪೈ ಮಾಹಿತಿ ನೀಡಿದರು. ಪ್ರಸ್ತುತ ವರ್ಷ ಕಾಲೇಜುಗಳಲ್ಲಿ ನೂತನ ಶಿಕ್ಷಣ ನೀತಿ ಆಶಯವನ್ನು ಆಧರಿಸಿ ಪಠ್ಯಕ್ರಮವನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಾಲೇಜುಗಳಲ್ಲಿ ಕೊಂಕಣಿ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಮೈಕಲ್ ಸಾ0ತುಮೇಯರ್ ಅಭಿಪ್ರಾಯ ಪ್ರಾಯಪಟ್ಟರು. ಮಡಂತ್ಯಾರು ಸೈಂಟ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪ್ರೊ. ವೆಂಕಟೇಶ್ ನಾಯಕ್ ಪೀಠದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು