9:59 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕೊಂಕಣಿ ಅಧ್ಯಯನ ಪೀಠ: 2021- 22ನೇ ಸಾಲಿನ ಕಾರ್ಯಯೋಜನೆ ಅನುಷ್ಠಾನ ಸಭೆ

07/11/2021, 19:58

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka news):ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಹಾಗೂ ಕುಲಸಚಿವ ಪ್ರೊ.ಕಿಶೋರ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕೊಂಕಣಿ ಅಧ್ಯಯನ ಪೀಠದ 2021-22ರ ಸಾಲಿನ ಕಾರ್ಯಯೋಜನೆಯನ್ನು ಅನುಷ್ಠಾನಗೊಳಿಸುವುದರ ಸಲುವಾಗಿ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಕಾಲೇಜುಗಳ ಉಪನ್ಯಾಸಕರ ಸಭೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಕರೆಯಲಾಗಿತ್ತು. ಸದ್ರಿ ಸಭೆಯಲ್ಲಿ ಕೊಂಕಣಿ ಅಧ್ಯಯನ ಪೀಠದ ಸವಿಸ್ತಾರ ಮಾಹಿತಿಯನ್ನು ಪೀಠದ ಸಂಯೋಜಕ ಡಾ.ಜಯವಂತ ನಾಯಕ್ ನೀಡಿದರು. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವಿವಿಧ ಕಾಲೇಜುಗಳಲ್ಲಿ ಕೊಂಕಣಿ ಸಾಹಿತ್ಯ, ಸಂಸ್ಕೃತಿಗೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಸಂಘಟಿಸುವ ಕುರಿತು ತೀರ್ಮಾನಿಸಲಾಯಿತು. ಅದೇ ರೀತಿ ವಿವಿಧ ಕಾಲೇಜುಗಳಲ್ಲಿ ವಿಶೇಷ ಉಪನ್ಯಾಸ, ಸರ್ಟಿಫಿಕೇಟ್ ಕೋರ್ಸ್, ಕೊಂಕಣಿ ಕ್ಲಬ್ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಅದಲ್ಲದೇ, ಕೊಂಕಣಿ ಸ್ನಾತಕೋತ್ತರ ಪದವಿಯ ಕುರಿತು ಸಂಯೋಜಕ ದೇವದಾಸ ಪೈ ಮಾಹಿತಿ ನೀಡಿದರು. ಪ್ರಸ್ತುತ ವರ್ಷ ಕಾಲೇಜುಗಳಲ್ಲಿ ನೂತನ ಶಿಕ್ಷಣ ನೀತಿ ಆಶಯವನ್ನು ಆಧರಿಸಿ ಪಠ್ಯಕ್ರಮವನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಕಾಲೇಜುಗಳಲ್ಲಿ ಕೊಂಕಣಿ ಶಿಕ್ಷಣಕ್ಕೆ ಉತ್ತೇಜನ ನೀಡಬೇಕು ಎಂದು ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಮೈಕಲ್ ಸಾ0ತುಮೇಯರ್ ಅಭಿಪ್ರಾಯ ಪ್ರಾಯಪಟ್ಟರು. ಮಡಂತ್ಯಾರು ಸೈಂಟ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕರಾದ ಪ್ರೊ. ವೆಂಕಟೇಶ್ ನಾಯಕ್ ಪೀಠದ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಸಲಹೆ ಸೂಚನೆಗಳನ್ನು ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು