2:02 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಮತ್ತೆ ಗತ ವೈಭವಕ್ಕೆ: ನೂತನ ಕುಲಪತಿ ಪ್ರೊ. ಧರ್ಮ ವಿಶ್ವಾಸ

16/05/2024, 21:32

ಮಂಗಳಗಂಗೋತ್ರಿ(reporterkarnataka.com): ಮಂಗಳೂರು ವಿವಿಯು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಶೀಘ್ರದಲ್ಲಿ ಅವೆಲ್ಲವನ್ನು ಮೀರಿ ಮತ್ತೆ ಹಳೆಯ ವೈಭವಕ್ಕೆ ಮರಳುತ್ತೇವೆ ಎಂದು ಮಂಗಳೂರು ವಿವಿಯ 10ನೇ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಡಾ. ಪಿ. ಎಲ್. ಧರ್ಮ ಹೇಳಿದರು. ತಮ್ಮ ವಿದ್ಯಾರ್ಥಿ ಜೀವನದ ಹಲವು ಸವಿ ನೆನಪುಗಳನ್ನು ಹಂಚಿಕೊಂಡ ಪ್ರೊ. ಡಾ. ಪಿ. ಎಲ್. ಧರ್ಮ ನನ್ನ ವ್ಯಕ್ತಿತ್ವವನ್ನು ರೂಪಿಸಿದ್ದು ಮಂಗಳೂರು ವಿಶ್ವ ವಿದ್ಯಾನಿಲಯ, ಈ ನಿಟ್ಟಿನಲ್ಲಿ ನನ್ನ ಸ್ನೇಹಿತರ, ಅಧ್ಯಾಪಕರ ಪಾತ್ರ ಅಪಾರವಾದದು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘದ ವತಿಯಿಂದ ವಿಶ್ವವಿದ್ಯಾಲಯದ ನೂತನ ಕುಲಪತಿ, ಇದೇ ವಿವಿ ಯ ರಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಪ್ರೊ. ಡಾ. ಪಿ. ಎಲ್ ಧರ್ಮ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿವಿ ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳಾದ ವಿಶ್ವನಾಥ್, ರವೀಂದ್ರ ಆಚಾರಿ , ಎ. ಎಂ. ಖಾನ್, ನಾರಾಯಣ ಮತ್ತು ಪ್ರಶಾಂತ್ ನಾಯ್ಕ ನೂತನ ಕುಲಪತಿಗಳ ಜೊತೆಗಿನ ತಮ್ಮ ನಡುವಿನ ಭಾಂದವ್ಯದ ಕುರಿತು ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆ ಕುರಿತು ಮನದಾಳದ ಮಾತುಗಳನ್ನು ಹಂಚಿಕೊಂಡರು.
ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಮೋಹನ್ ಸಿಂಘೆ ಅಧ್ಯಕ್ಷತೆ ವಹಿಸಿದರು.. ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ . ದೇವೇಂದ್ರಪ್ಪ, ಹಣಕಾಸು ಅಧಿಕಾರಿ, ಪ್ರೊ ವೈ. ಸಂಗಪ್ಪ ಉಪಸ್ಥಿತರಿದ್ದರು
ಪ್ರೊ . ನಿರ್ಮಲ ಪ್ರಾರ್ಥಿಸಿದರು, ಡಾ. ಧನಂಜಯ್ ಕುಂಬ್ಳೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು