11:49 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಮತ್ತೆ ಗತ ವೈಭವಕ್ಕೆ: ನೂತನ ಕುಲಪತಿ ಪ್ರೊ. ಧರ್ಮ ವಿಶ್ವಾಸ

16/05/2024, 21:32

ಮಂಗಳಗಂಗೋತ್ರಿ(reporterkarnataka.com): ಮಂಗಳೂರು ವಿವಿಯು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಶೀಘ್ರದಲ್ಲಿ ಅವೆಲ್ಲವನ್ನು ಮೀರಿ ಮತ್ತೆ ಹಳೆಯ ವೈಭವಕ್ಕೆ ಮರಳುತ್ತೇವೆ ಎಂದು ಮಂಗಳೂರು ವಿವಿಯ 10ನೇ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಡಾ. ಪಿ. ಎಲ್. ಧರ್ಮ ಹೇಳಿದರು. ತಮ್ಮ ವಿದ್ಯಾರ್ಥಿ ಜೀವನದ ಹಲವು ಸವಿ ನೆನಪುಗಳನ್ನು ಹಂಚಿಕೊಂಡ ಪ್ರೊ. ಡಾ. ಪಿ. ಎಲ್. ಧರ್ಮ ನನ್ನ ವ್ಯಕ್ತಿತ್ವವನ್ನು ರೂಪಿಸಿದ್ದು ಮಂಗಳೂರು ವಿಶ್ವ ವಿದ್ಯಾನಿಲಯ, ಈ ನಿಟ್ಟಿನಲ್ಲಿ ನನ್ನ ಸ್ನೇಹಿತರ, ಅಧ್ಯಾಪಕರ ಪಾತ್ರ ಅಪಾರವಾದದು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘದ ವತಿಯಿಂದ ವಿಶ್ವವಿದ್ಯಾಲಯದ ನೂತನ ಕುಲಪತಿ, ಇದೇ ವಿವಿ ಯ ರಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಪ್ರೊ. ಡಾ. ಪಿ. ಎಲ್ ಧರ್ಮ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿವಿ ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳಾದ ವಿಶ್ವನಾಥ್, ರವೀಂದ್ರ ಆಚಾರಿ , ಎ. ಎಂ. ಖಾನ್, ನಾರಾಯಣ ಮತ್ತು ಪ್ರಶಾಂತ್ ನಾಯ್ಕ ನೂತನ ಕುಲಪತಿಗಳ ಜೊತೆಗಿನ ತಮ್ಮ ನಡುವಿನ ಭಾಂದವ್ಯದ ಕುರಿತು ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆ ಕುರಿತು ಮನದಾಳದ ಮಾತುಗಳನ್ನು ಹಂಚಿಕೊಂಡರು.
ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಮೋಹನ್ ಸಿಂಘೆ ಅಧ್ಯಕ್ಷತೆ ವಹಿಸಿದರು.. ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ . ದೇವೇಂದ್ರಪ್ಪ, ಹಣಕಾಸು ಅಧಿಕಾರಿ, ಪ್ರೊ ವೈ. ಸಂಗಪ್ಪ ಉಪಸ್ಥಿತರಿದ್ದರು
ಪ್ರೊ . ನಿರ್ಮಲ ಪ್ರಾರ್ಥಿಸಿದರು, ಡಾ. ಧನಂಜಯ್ ಕುಂಬ್ಳೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು