4:28 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಮತ್ತೆ ಗತ ವೈಭವಕ್ಕೆ: ನೂತನ ಕುಲಪತಿ ಪ್ರೊ. ಧರ್ಮ ವಿಶ್ವಾಸ

16/05/2024, 21:32

ಮಂಗಳಗಂಗೋತ್ರಿ(reporterkarnataka.com): ಮಂಗಳೂರು ವಿವಿಯು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಶೀಘ್ರದಲ್ಲಿ ಅವೆಲ್ಲವನ್ನು ಮೀರಿ ಮತ್ತೆ ಹಳೆಯ ವೈಭವಕ್ಕೆ ಮರಳುತ್ತೇವೆ ಎಂದು ಮಂಗಳೂರು ವಿವಿಯ 10ನೇ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಡಾ. ಪಿ. ಎಲ್. ಧರ್ಮ ಹೇಳಿದರು. ತಮ್ಮ ವಿದ್ಯಾರ್ಥಿ ಜೀವನದ ಹಲವು ಸವಿ ನೆನಪುಗಳನ್ನು ಹಂಚಿಕೊಂಡ ಪ್ರೊ. ಡಾ. ಪಿ. ಎಲ್. ಧರ್ಮ ನನ್ನ ವ್ಯಕ್ತಿತ್ವವನ್ನು ರೂಪಿಸಿದ್ದು ಮಂಗಳೂರು ವಿಶ್ವ ವಿದ್ಯಾನಿಲಯ, ಈ ನಿಟ್ಟಿನಲ್ಲಿ ನನ್ನ ಸ್ನೇಹಿತರ, ಅಧ್ಯಾಪಕರ ಪಾತ್ರ ಅಪಾರವಾದದು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘದ ವತಿಯಿಂದ ವಿಶ್ವವಿದ್ಯಾಲಯದ ನೂತನ ಕುಲಪತಿ, ಇದೇ ವಿವಿ ಯ ರಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಪ್ರೊ. ಡಾ. ಪಿ. ಎಲ್ ಧರ್ಮ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿವಿ ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳಾದ ವಿಶ್ವನಾಥ್, ರವೀಂದ್ರ ಆಚಾರಿ , ಎ. ಎಂ. ಖಾನ್, ನಾರಾಯಣ ಮತ್ತು ಪ್ರಶಾಂತ್ ನಾಯ್ಕ ನೂತನ ಕುಲಪತಿಗಳ ಜೊತೆಗಿನ ತಮ್ಮ ನಡುವಿನ ಭಾಂದವ್ಯದ ಕುರಿತು ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆ ಕುರಿತು ಮನದಾಳದ ಮಾತುಗಳನ್ನು ಹಂಚಿಕೊಂಡರು.
ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಮೋಹನ್ ಸಿಂಘೆ ಅಧ್ಯಕ್ಷತೆ ವಹಿಸಿದರು.. ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ . ದೇವೇಂದ್ರಪ್ಪ, ಹಣಕಾಸು ಅಧಿಕಾರಿ, ಪ್ರೊ ವೈ. ಸಂಗಪ್ಪ ಉಪಸ್ಥಿತರಿದ್ದರು
ಪ್ರೊ . ನಿರ್ಮಲ ಪ್ರಾರ್ಥಿಸಿದರು, ಡಾ. ಧನಂಜಯ್ ಕುಂಬ್ಳೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು