10:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಮತ್ತೆ ಗತ ವೈಭವಕ್ಕೆ: ನೂತನ ಕುಲಪತಿ ಪ್ರೊ. ಧರ್ಮ ವಿಶ್ವಾಸ

16/05/2024, 21:32

ಮಂಗಳಗಂಗೋತ್ರಿ(reporterkarnataka.com): ಮಂಗಳೂರು ವಿವಿಯು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದೆ. ಆದರೆ ಶೀಘ್ರದಲ್ಲಿ ಅವೆಲ್ಲವನ್ನು ಮೀರಿ ಮತ್ತೆ ಹಳೆಯ ವೈಭವಕ್ಕೆ ಮರಳುತ್ತೇವೆ ಎಂದು ಮಂಗಳೂರು ವಿವಿಯ 10ನೇ ಉಪ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದ ಪ್ರೊ. ಡಾ. ಪಿ. ಎಲ್. ಧರ್ಮ ಹೇಳಿದರು. ತಮ್ಮ ವಿದ್ಯಾರ್ಥಿ ಜೀವನದ ಹಲವು ಸವಿ ನೆನಪುಗಳನ್ನು ಹಂಚಿಕೊಂಡ ಪ್ರೊ. ಡಾ. ಪಿ. ಎಲ್. ಧರ್ಮ ನನ್ನ ವ್ಯಕ್ತಿತ್ವವನ್ನು ರೂಪಿಸಿದ್ದು ಮಂಗಳೂರು ವಿಶ್ವ ವಿದ್ಯಾನಿಲಯ, ಈ ನಿಟ್ಟಿನಲ್ಲಿ ನನ್ನ ಸ್ನೇಹಿತರ, ಅಧ್ಯಾಪಕರ ಪಾತ್ರ ಅಪಾರವಾದದು ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಅಧ್ಯಾಪಕರ ಸಂಘದ ವತಿಯಿಂದ ವಿಶ್ವವಿದ್ಯಾಲಯದ ನೂತನ ಕುಲಪತಿ, ಇದೇ ವಿವಿ ಯ ರಾಜಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕರು ಪ್ರೊ. ಡಾ. ಪಿ. ಎಲ್ ಧರ್ಮ ಅವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಂಗಳೂರು ವಿವಿ ವಿವಿಧ ವಿಭಾಗಗಳ ಪ್ರಾಧ್ಯಾಪಕರುಗಳಾದ ವಿಶ್ವನಾಥ್, ರವೀಂದ್ರ ಆಚಾರಿ , ಎ. ಎಂ. ಖಾನ್, ನಾರಾಯಣ ಮತ್ತು ಪ್ರಶಾಂತ್ ನಾಯ್ಕ ನೂತನ ಕುಲಪತಿಗಳ ಜೊತೆಗಿನ ತಮ್ಮ ನಡುವಿನ ಭಾಂದವ್ಯದ ಕುರಿತು ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಅವರ ಕೊಡುಗೆ ಕುರಿತು ಮನದಾಳದ ಮಾತುಗಳನ್ನು ಹಂಚಿಕೊಂಡರು.
ಅಧ್ಯಾಪಕರ ಸಂಘದ ಅಧ್ಯಕ್ಷ ಡಾ. ಮೋಹನ್ ಸಿಂಘೆ ಅಧ್ಯಕ್ಷತೆ ವಹಿಸಿದರು.. ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ . ದೇವೇಂದ್ರಪ್ಪ, ಹಣಕಾಸು ಅಧಿಕಾರಿ, ಪ್ರೊ ವೈ. ಸಂಗಪ್ಪ ಉಪಸ್ಥಿತರಿದ್ದರು
ಪ್ರೊ . ನಿರ್ಮಲ ಪ್ರಾರ್ಥಿಸಿದರು, ಡಾ. ಧನಂಜಯ್ ಕುಂಬ್ಳೆ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು