1:00 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ರಾಷ್ಟ್ರೀಯ ಸೇವಾ ಯೋಜನೆಗೆ ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಪ್ರಶಸ್ತಿ: ಬೆಂಗಳೂರಿನಲ್ಲಿ ರಾಜ್ಯಪಾಲರು ಪ್ರದಾನ

11/10/2023, 21:39

ಬೆಂಗಳೂರು(reporterkarnataka.com): ರಾಜ್ಯ ರಾ.ಸೇ.ಯೋಜನಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಬೆಂಗಳೂರು ನೀಡುವ 2021-22ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ರಾಜ್ಯ ಪ್ರಶಸ್ತಿಯನ್ನು ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಸೇವೆಯನ್ನು ಪರಿಗಣಿಸಿ ರಾಜ್ಯಪಾಲ ಥಾಮರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.
ರಾಜಭವನದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮಂಗಳವಾರ
ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅತ್ಯುತ್ತಮ ರಾಸೇ ಯೋಜನಾ ಘಟಕ/ಯೋಜನಾಧಿಕಾರಿ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿಯನ್ನು ಮಂಗಳೂರು ಪಡೆದಿದೆ. ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ವ್ಯಾಪ್ತಿಯ ಕಾಲೇಜುಗಳ ಪೈಕಿ ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿಯನ್ನು
1.ಡಾ. ಲಕ್ಷ್ಮೀನಾರಾಯಣ ಕೆ.ಎಸ್‌.( ಎಸ್‌.ಡಿ.ಎಂ.ಕಾಲೇಜು, ಉಜಿರೆ) ಹಾಗೂ
2. ಸೀಮಾ ಪ್ರಭು ಎಸ್. (ಕೆನರಾ ಕಾಲೇಜು, ಮಂಗಳೂರು) ಗಳಿಸಿದ್ದಾರೆ.


ಸ್ವಯಂ ಸೇವಕ ಪ್ರಶಸ್ತಿಯನ್ನು ಅಭಿನ್ ಬಂಗೇರ (ತೃತೀಯ ಬಿಕಾಂ, ಕೆನರಾ ಕಾಲೇಜು, ಮಂಗಳೂರು) ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು