9:32 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗ ಉದ್ಘಾಟನೆ

19/09/2025, 18:19

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗವನ್ನು ರಚಿಸಲಾಗಿದ್ದು, ಅದರ ಉದ್ಘಾಟನೆ ನೆರವೇರಿತು.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಭಾಗವಹಿಸಿ ಮಾತನಾಡಿ, ಸ್ತ್ರೀ ಆಯೋಗ ಘಟಕಕ್ಕೆ ಶುಭ ಹಾರೈಸಿದರು.
ಘಟಕದ ಅಧ್ಯಕ್ಷರಾಗಿ ಶೀಲಾ ಡಿ ಸೋಜಾ, ಕಾರ್ಯದರ್ಶಿಯಾಗಿ ವೆಲೆಂಟಿನಾ ರೊಡ್ರಿಗಸ್, ಖಜಾಂಚಿಯಾಗಿ ಲಿಝೀ ಫೆರ್ನಾಂಡಿಸ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರೆಸಿಲ್ಲಾ ಫೆರ್ನಾಂಡಿಸ್, ಶಾಂತಿ ಮೊಂತೇರೊ, ಶೋಭಾ ಸಿಕ್ವೇರಾ, ಜೂಲಿಯಾನಾ ಫೆರ್ನಾಂಡಿಸ್ ಅವರು ಆಯ್ಕೆಯಾಗಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಸ್ತ್ರೀ ಆಯೋಗದ ಕೇಂದ್ರೀಯ ಸಮಿತಿಯ ಪ್ರತಿನಿಧಿಗಳಾಗಿ ಕಾರ್ಯದರ್ಶಿ ಅಮಿತಾ ಫ್ರಾಂಕ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯೆ ಉಷಾ ಫೆರ್ನಾಂಡಿಸ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು