4:37 PM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗ ಉದ್ಘಾಟನೆ

19/09/2025, 18:19

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗವನ್ನು ರಚಿಸಲಾಗಿದ್ದು, ಅದರ ಉದ್ಘಾಟನೆ ನೆರವೇರಿತು.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಭಾಗವಹಿಸಿ ಮಾತನಾಡಿ, ಸ್ತ್ರೀ ಆಯೋಗ ಘಟಕಕ್ಕೆ ಶುಭ ಹಾರೈಸಿದರು.
ಘಟಕದ ಅಧ್ಯಕ್ಷರಾಗಿ ಶೀಲಾ ಡಿ ಸೋಜಾ, ಕಾರ್ಯದರ್ಶಿಯಾಗಿ ವೆಲೆಂಟಿನಾ ರೊಡ್ರಿಗಸ್, ಖಜಾಂಚಿಯಾಗಿ ಲಿಝೀ ಫೆರ್ನಾಂಡಿಸ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರೆಸಿಲ್ಲಾ ಫೆರ್ನಾಂಡಿಸ್, ಶಾಂತಿ ಮೊಂತೇರೊ, ಶೋಭಾ ಸಿಕ್ವೇರಾ, ಜೂಲಿಯಾನಾ ಫೆರ್ನಾಂಡಿಸ್ ಅವರು ಆಯ್ಕೆಯಾಗಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಸ್ತ್ರೀ ಆಯೋಗದ ಕೇಂದ್ರೀಯ ಸಮಿತಿಯ ಪ್ರತಿನಿಧಿಗಳಾಗಿ ಕಾರ್ಯದರ್ಶಿ ಅಮಿತಾ ಫ್ರಾಂಕ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯೆ ಉಷಾ ಫೆರ್ನಾಂಡಿಸ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು