9:05 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗ ಉದ್ಘಾಟನೆ

19/09/2025, 18:19

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗವನ್ನು ರಚಿಸಲಾಗಿದ್ದು, ಅದರ ಉದ್ಘಾಟನೆ ನೆರವೇರಿತು.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಸಿಯಸ್ ಕುವೆಲ್ಲೊ ಅವರು ಭಾಗವಹಿಸಿ ಮಾತನಾಡಿ, ಸ್ತ್ರೀ ಆಯೋಗ ಘಟಕಕ್ಕೆ ಶುಭ ಹಾರೈಸಿದರು.
ಘಟಕದ ಅಧ್ಯಕ್ಷರಾಗಿ ಶೀಲಾ ಡಿ ಸೋಜಾ, ಕಾರ್ಯದರ್ಶಿಯಾಗಿ ವೆಲೆಂಟಿನಾ ರೊಡ್ರಿಗಸ್, ಖಜಾಂಚಿಯಾಗಿ ಲಿಝೀ ಫೆರ್ನಾಂಡಿಸ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರೆಸಿಲ್ಲಾ ಫೆರ್ನಾಂಡಿಸ್, ಶಾಂತಿ ಮೊಂತೇರೊ, ಶೋಭಾ ಸಿಕ್ವೇರಾ, ಜೂಲಿಯಾನಾ ಫೆರ್ನಾಂಡಿಸ್ ಅವರು ಆಯ್ಕೆಯಾಗಿದ್ದಾರೆ.
ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಸ್ತ್ರೀ ಆಯೋಗದ ಕೇಂದ್ರೀಯ ಸಮಿತಿಯ ಪ್ರತಿನಿಧಿಗಳಾಗಿ ಕಾರ್ಯದರ್ಶಿ ಅಮಿತಾ ಫ್ರಾಂಕ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯೆ ಉಷಾ ಫೆರ್ನಾಂಡಿಸ್ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು