7:37 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ ಸಚಿವ ಚಲುವರಾಯಸ್ವಾಮಿ ಸೂಚನೆ

17/04/2025, 15:52

ಬೆಂಗಳೂರು (reporterkarnataka.com): ಸರಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕರೆ ನೀಡಿದ್ದಾರೆ.
ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ಏರ್ಪಡಿಸಿದ್ದ 2025-26ನೇ ಸಾಲಿನ ಮುಂಗಾರು ಹಂಗಾಮು ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕೃಷಿ ಬಹುಜನರ ಪ್ರಧಾನ ಕಾಯಕ, ಈ ಕ್ಷೇತ್ರದಲ್ಲಿ ತೊಡಗಿದ ರೈತರು ಹಾಗೂ ಕೃಷಿ ಕಾರ್ಮಿಕರ ಹಿತ ಕಾಯುವುದು ಸರ್ಕಾರ ಹಾಗೂ ಇಲಾಖೆಯ ಜವಾಬ್ದಾರಿ ಅವರನ್ನು ಅಲೆದಾಡಿಸದೆ ಮನೆ ಬಾಗಿಲಿಗೆ ಯೋಜನೆಗಳ ಫಲ ತಲುಪಿಸಿ ಎಂದು ಸಚಿವರು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಕೃಷಿ ಬಹುತೇಕ ಮಳೆಯಾಶ್ರಿತವಾಗಿದೆ. ಹಾಗಾಗಿ ಬೆಳೆ ವಿಮೆ ಬಗ್ಗೆ ಹೆಚ್ಚಿನ ಅರಿವು ಮೂಡಿಸಿ ಎಲ್ಲಾ ರೈತರು ಈ ಯೋಜನೆ ವ್ಯಾಪ್ತಿಗೆ ಒಳಪಡುವಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಇಲಾಖೆಯಲ್ಲಿ ಕಳೆದ 2 ವರ್ಷಗಳಲ್ಲಿ ತೋರಿದ ಸಾಧನೆ ಜನಪರ ಕಾಳಜಿಯ ಸೇವೆಯನ್ನು ಅಭಿನಂದಾನಾರ್ಹವಾಗಿದೆ ಆದರೆ ಎಲ್ಲಾ ಜಿಲ್ಲೆಗಳಲ್ಲಿಯೂ ಒಂದೆ ರೀತಿಯ ಪ್ರಗತಿಯನ್ನು ನಿರೀಕ್ಷಿಸಲಾಗುತ್ತಿದೆ. ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಸಚಿವ ಚಲುವರಾಯಸ್ವಾಮಿ ಎಚ್ಚರಿಸಿದರು.
ಕೃಷಿ ವಿಶ್ವವಿದ್ಯಾನಿಲಯಗಳು ನಡೆಸುವ ಸಂಶೋಧನಾ ಫಲ ರೈತರಿಗೆ ಸಲುಭವಾಗಿ ತಲುಪುವಂತಾಗಬೇಕು. ಬೇಸಾಯದಲ್ಲಿ ತಂತ್ರಜ್ಞಾನ, ವೈಜ್ಞಾನಿಕತೆ ಪರಿಣಾಮಕಾರಿಯಾಗಿ ಅಳವಡಿಕೆಯಾಗಬೇಕು. ರೈತ ಕರೆ ಕೇಂದ್ರದಲ್ಲಿ ತಂತ್ರಾಂಶ ಸುಧಾರಣೆಯಾಗಬೇಕು, ಕೃಷಿಕರಿಗೆ ನಿಖರವಾದ ಮಾರ್ಗದರ್ಶನ ನೀಡಬೇಕು, ಆ ಮೂಲಕ ಕೃಷಿಕರ ಆರ್ಥಿಕ ಸುಧಾರಣೆಗೆ ನೆರವಾಗಬೇಕು ಎಂದು ಅವರು ಸಲಹೆ ನೀಡಿದರು.
ಕರ್ನಾಟಕವನ್ನು ತೊಗರಿ ಬೆಳೆಯಲ್ಲಿ ಮುಂಚೂಣಿ ರಾಜ್ಯವನ್ನಾಗಿಸುವ ಗುರಿಹೊಂದಲಾಗಿದೆ
ಎಲ್ಲಾ ಕ್ಷೇತ್ರಗಳಿಗೂ ಕೃಷಿ ಭಾಗ್ಯ ಯೋಜನೆ ವಿಸ್ತರಿಸಲಾಗಿದೆ.
ಸಾವಯವ ಮತ್ತು ಸಮಗ್ರ ಬೇಸಾಯ ಪದ್ದತಿ ಪ್ರೋತ್ಸಾಹಕ್ಕೂ ಯೋಜನೆ ಜಾರಿಗೊಳಿಸಲಾಗಿದೆ.ರೈತರು ತಮ್ಮ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಬೇಕು ಎಂದರು.
ಸರ್ಕಾರ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಒದಗಿಸುತ್ತಿದೆ, ಎಲ್ಲಾ ವರ್ಗದ ರೈತರಿಗೆ ಸೂಕ್ಷ್ಮ ನೀರಾವರಿ ಸಾಧನಗಳನ್ನು ಕೊಳ್ಳಲು ಇದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದೆ, ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನಿನಲ್ಲಿ ಯಾವುದೇ ಕೊರತೆ ಇಲ್ಲ ಪೂರೈಕೆ, ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿ ಸಿಬ್ಬಂದಿ ನಿಗಾ ವಹಿಸಬೇಕು ಎಂದು ಕೃಷಿ ಸಚಿವರು ಸೂಚನೆ ನೀಡಿದರು.
ಕೃಷಿ ಇಲಾಖೆಯ ಕಾರ್ಯದರ್ಶಿ ವಿ.ಅನ್ಬುಕುಮಾರ್, ಆಯುಕ್ತರಾದ ವೈ.ಎಸ್.ಪಾಟೀಲ್ ಅವರು ಮಾತನಾಡಿ ಕಾರ್ಯಾಗಾರದ ಉದ್ದೇಶ ಸರ್ಕಾರದ ನಿರೀಕ್ಷೆಗಳ ಬಗ್ಗೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟರು.
ಇದೇ ವೇಳೆ 2024-25ನೇ ಸಾಲಿನಲ್ಲಿ ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಜಿಲ್ಲೆಗಳ ಅಧಿಕಾರಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು ಹಾಗೂ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು.
ಜಲಾನಯನ ಇಲಾಖೆ ಆಯುಕ್ತರಾದ ಮಹೇಶ್ ಶಿರೂರು, ನಿರ್ದೇಶಕರಾದ ಭಂಥನಾಳ, ಕೃಷಿ ನಿರ್ದೇಶಕರಾದ ಡಾ. ಜಿ.ಟಿ.ಪುತ್ರ, ಸೆಕಂಡರಿ ಅಗ್ರಿಕಲ್ಚರ್ ನಿರ್ದೇಶಕರಾದ ವೆಂಕಟರಮನ ರೆಡ್ಡಿ ಪಾಟೀಲ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು