10:38 AM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಮಂಗಳೂರು: ಯಕ್ಷಗಾನ ವೇಷಧಾರಿ ರವಿರಾಜ ಪನೆಯಾಲಗೆ ‘ಶ್ರೀ ಕದ್ರಿ’ ಪ್ರಶಸ್ತಿ ಪ್ರದಾನ

20/12/2023, 12:10

ಮಂಗಳೂರು(reporterkarnataka.com): ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನ ಪ್ರಾಂಗಣದಲ್ಲಿ ನಡೆದ ಯಕ್ಷಗಾನ ಬಯಲಾಟ ಸಂದರ್ಭ ವೇಷಧಾರಿ ರವಿರಾಜ ಪನೆಯಾಲ ಅವರಿಗೆ ಶ್ರೀ ಕದ್ರಿ” ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕುಂದೇಶ್ವರ ಪ್ರತಿಷ್ಠಾನ ಅಧ್ಯಕ್ಷ ಜಿತೇಂದ್ರ ಕುಂದೇಶ್ವರ ಅಭಿನಂದನಾ ಭಾಷಣ ಮಾಡಿ, ಪನೆಯಾಲರು ಕೀಚಕ, ಭೀಮ, ಸುಂದೋಪ ಸುಂದ ಮೊದಲಾದ ಪಾತ್ರಗಳಿಗೆ ಜೀವ ತುಂಬಿದವರು. ಸಮರ್ಥ ಅರ್ಥಧಾರಿ, ಕೃಷಿಕನಾಗಿ ಮತ್ತು ಯಕ್ಷಗಾನದಲ್ಲೂ ಕೃಷಿ ಮಾಡುತ್ತಿರುವ ಪನೆಯಾಲರು ಯುವ ಕಲಾವಿದರಿಗೆ ಆದರ್ಶ ಯಕ್ಷಗಾನ ಬಯಲಾಟ ತುಳುನಾಡಿನ ಜೀವನಾಡಿ, ಸಾವಿರಕ್ಕೂ ಮಿಕ್ಕಿ ವೃತ್ತಿಪರ ಕಲಾವಿದರು, ಹತ್ತು ಸಾವಿರಕ್ಕೂ ಮಿಕ್ಕಿ ಹವ್ಯಾಸಿಗಳು ಇರುವ ಕ್ಷೇತ್ರಕ್ಕೆ ದೊಡ್ಡ ಸಂಖ್ಯೆಯಲ್ಲಿ ಮಕ್ಕಳು ಕಲಿಯಲು ಬರುತ್ತಿರುವುದು ಕಲೆಯ ವಿಶೇಷ ಶಕ್ತಿ ಎಂದರು.
ಪ್ರಶಸ್ತಿ ಸ್ವೀಕರಿಸಿದ ರವಿರಾಜ‌ ಪನೆಯಾಲ ಮಾತನಾಡಿ, ಯಕ್ಷವೇಷ ಧರಿಸಿದ ನನಗೆ ಸನ್ಮಾನ ಮಾಡಿದ್ದೀರಿ. ‌ರಂಗದಲ್ಲಿ ಮಾಡುವ ಪಾತ್ರಗಳಿಗೆ ಈ ಪ್ರಶಸ್ತಿ. ಇದು ಯಕ್ಷಗಾನ ಕಲೆಗೆ ಸಂದ ಗೌರವ ಎಂದರು.

ಕಾರ್ಪೊರೇಟರ್ ಮನೋಹರ ಶೆಟ್ಟಿ ಕದ್ರಿ, ಕಾರ್ಪೊರೇಟರ್ ಶಕಿಲಾ ಕಾವ, ಶಿವಳ್ಳಿ ಸ್ಪಂದನ ಅಧ್ಯಕ್ಷ ಕೃಷ್ಣ ಭಟ್ ಕದ್ರಿ, ಪೊಳಲಿ ಗಿರಿಪ್ರಕಾಶ್ ತಂತ್ರಿ, ಸುಧಾಕರ ರಾವ್ ಪೇಜಾವರ, ಆಯೋಜಕರಾದ ಕುಂಜತ್ತೋಡಿ ವಾಸುದೇವ ಭಟ್ ಕದ್ರಿ, ದೀಪಾ. ಕೆ.ಎಸ್., ಋತ್ವಿಕ್ ಅಲೆವೂರಾಯ, ಸಂಹಿತಾ ಅಲೆವೂರಾಯ, ಸುಜಾತ ಕುಮಾರಿ, ರಾಘವೇಂದ್ರ ಭಟ್ ಇದ್ದರು.
ಯಕ್ಷಕೂಟ ಸಂಚಾಲಕ ಕದ್ರಿ ರಾಮಚಂದ್ರ ಭಟ್ ಎಲ್ಲೂರು ನಿರೂಪಿಸಿ ವಂದಿಸಿದರು.
ಆಸ್ರಣ್ಣ ಭೇಟಿ: ಕಟೀಲು ಕ್ಷೇತ್ರದ ಆನುವಂಶಿಕ ಅರ್ಚಕ ವೇದಮೂರ್ತಿ ಕಮಲಾದೇವಿಪ್ರಸಾದ ಆಸ್ರಣ್ಣ, ಶ್ರೀಹರಿನಾರಾಯಣದಾಸ ಆಸ್ರಣ್ಣ ಭೇಟಿ‌ ನೀಡಿ, ಚೌಕಿಯಲ್ಲಿ ದೇವರ ದರ್ಶನ ಪಡೆದರು.

ಇತ್ತೀಚಿನ ಸುದ್ದಿ

ಜಾಹೀರಾತು