4:16 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಂಗಳೂರು: ಯೋಗ ಕುರಿತು 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ಸಮಾರೋಪ

14/03/2022, 00:01

ಮಂಗಳೂರು(reporterkarnataka.com): ಕೆನರಾ ಸಂಧ್ಯಾ ಕಾಲೇಜು ಹಾಗೂ ಶ್ರೀ ಪತಂಜಲಿ ಯೋಗ ಪ್ರತಿಷ್ಠಾನ ಮಂಗಳೂರು (ರಿ) ಇದರ ಜಂಟಿ ಆಶ್ರಯದಲ್ಲಿ 30 ಗಂಟೆಯ ಸರ್ಟಿಫಿಕೇಟ್ ಕೋರ್ಸ್ ನ ಸಮಾರೋಪ ಸಮಾರಂಭ ಶನಿವಾರ ನಡೆಯಿತು.

ಮುಖ್ಯ ಅತಿಥಿಯಾಗಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಖಜಾಂಜಿ ಸಿಎ ವಾಮನ್ ಕಾಮತ್ ಮಾತನಾಡಿ, ಯೋಗದಿಂದ ಆತ್ಮಶಕ್ತಿ, ಮನಸ್ಸಿಗೆ ನೆಮ್ಮದಿ ಗಳಿಸಲು ಸಾಧ್ಯ ಹಾಗೂ ಇದನ್ನು ವಿದ್ಯಾರ್ಥಿ ಜೀವನದಿಂದಲೇ ಬೆಳೆಸಿಕೊಳ್ಳಬೇಕು ಎಂದು ನುಡಿದರು.


ಯೋಗ ಸರ್ಟಿಫಿಕೇಟ್ ಕೋರ್ಸನ ಸಂಪನ್ಮೂಲ ವ್ಯಕ್ತಿ ಏಕನಾಥ್ ಬಾಳಿಗ ಮಾತನಾಡಿ, ಯೋಗಾಭ್ಯಾಸವು ನಮ್ಮ ಜೇವನದ ಅವಿಭಾಜ್ಯ ಅಂಗವಾಗಿರಬೇಕು, ನಿತ್ಯ ಯೋಗಾಭ್ಯಾಸದಿಂದ ಮಾನಸಿಕ ನೆಮ್ಮದಿ ಹಾಗೂ ಶಿಸ್ತುಬದ್ಧ ಜೀವನ ನಡೆಸಲು ಸಾಧ್ಯ ಎಂದರು. ಇಂತಹ ಸರ್ಟಿಫಿಕೇಟ್ ಕೋರ್ಸಿನಿಂದ ಮುಂದಕ್ಕೆ ಹಲವಾರು ಯೋಗಶಿಕ್ಷಕರು ಸಮಾಜಕ್ಕೆ ಸಿಗಲಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ,ಕೆನರಾ ಸಂಧ್ಯಾ ಕಾಲೇಜಿನ ಸಂಚಾಲಕರಾದ ಸಿಎ ಜಗನ್ನಾಥ ಕಾಮತ್ ವಹಿಸಿ, ಸರ್ಟಿಫಿಕೇಟ್ ಕೋರ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಜೀವನದಲ್ಲಿ ಉನ್ನತ ಸ್ಥಾನ ತಲುಪಲು ಸೂಕ್ತ ಮನೋಭಾವ ಅಗತ್ಯ,ಈ ನಿಟ್ಟಿನಲ್ಲಿ ಇಂತಹ ಸರ್ಟಿಫಿಕೇಟ್ ಕೋರ್ಸಗಳು ಅನುಕೂಲ ಎಂದರು.

ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ, ಉಷಾ ನಾಯಕ್ ಕಾರ್ಯಕ್ರಮದ ಸಂಕ್ಷಿಪ್ತ ವರದಿ ಪ್ರಸ್ತುತ ಪಡಿಸಿದವರು.ಯೋಗ ವಿದ್ಯಾರ್ಥಿಗಳಿಗೆ ಸಂಪನ್ಮೂಲ ಸಾಮಾಗ್ರಿಗಳನ್ನು ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕೆನರಾ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಅನಿಲಾ ಅತಿಥಿಗಳನ್ನು ಸ್ವಾಗತಿಸಿದರು.

ಕೆನರಾ ಕಾಲೇಜು ಪ್ರಾಂಶುಪಾಲೆ ಡಾ.ಪ್ರೇಮಲತಾ.ವಿ, ಆಂತರಿಕ ಗುಣಮಟ್ಟ ಸಂಯೋಜಕರಾದ ದೇಜಮ್ಮ, ಹಾರ್ದಿಕ್ ಚೌಹಾನ್, ಪತಂಜಲಿ ಯೋಗ ಪ್ರತಿಷ್ಠಾನದ ಟ್ರಷ್ಟಿ ಪ್ರತಿಭಾ ನಾಯಕ್, ಶಿಕ್ಷಕರಾದ ಪ್ರಭಾ ಎನ್.ವಿ, ಸಂಜನಾ ಮೂರ್ತಿ, ಉಪಸ್ಥಿತರಿದ್ದರು.

ಈ ಸಂಧರ್ಭದಲ್ಲಿ ಯೋಗಗುರು ಏಕನಾಥ್ ಬಾಳಿಗ ಇವರಿಗೆ ಸನ್ಮಾನಿಸಲಾಯಿತು.ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.


ಸರ್ಟಿಫಿಕೇಟ್ ಕೋರ್ಸ್ ಸಂಯೋಜಕಿ ಉಷಾ ನಾಯಕ್ ವಂದನಾರ್ಪಣೆಗೈದರು. ಸೀಮಾ ಪ್ರಭು ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು