2:37 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

Mangaluru | ಗುಂಪು ದಾಳಿಯಿಂದ ಯುವಕನ ಸಾವು: ಇನ್‌ಸ್ಪೆಕ್ಟರ್ ಸೇರಿದಂತೆ 3 ಮಂದಿ ಪೊಲೀಸರ ಅಮಾನತು

01/05/2025, 12:16

ಮಂಗಳೂರು(reporterkarnataka.com): ನಗರದ ಹೊರವಲಯದ ಕುಡುಪು ಬಳಿ ಯುವಕನೊಬ್ಬ ಗುಂಪು ದಾಳಿಗೊಳಗಾಗಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 20ಕ್ಕೇರಿದೆ.
ಮಂಗಳೂರು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್
ಶಿವಕುಮಾರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ. ಮತ್ತು ಕಾನ್‌ಸ್ಟೇಬಲ್ ಎಲ್ಲಾಲಿಂಗ ಅವರು ಅಮಾನತುಗೊಂಡಿದ್ದಾರೆ.
ಕುಡುಪು ಭಟ ಕಲ್ಲುರ್ಟಿ ದೈವಸ್ಥಾನದ ಸಮೀಪದಲ್ಲಿ ಭಾನುವಾರ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸರಿಯಾದ ದಿಕ್ಕಿನಲ್ಲಿ ತನಿಖೆ ನಡೆಸಿಲ್ಲ ಎಂಬ ಕಾರಣಕ್ಕೆ ಅಮಾನತುಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು 25 ಜನರನ್ನು ತನಿಖೆಗೆ ಒಳಪಡಿಸಿ ಮೊದಲಿಗೆ 15 ಜನರನ್ನು ಬಂಧಿಸಿದ್ದರು, ಬಳಿಕ ಬಂಧಿತರ ಸಂಖ್ಯೆ 20 ಕ್ಕೆ ಏರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು