8:31 PM Thursday29 - January 2026
ಬ್ರೇಕಿಂಗ್ ನ್ಯೂಸ್
ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ನಲ್ಲಿ ಐಸಿವೈಎಂ ವತಿಯಿಂದ ಯುವೋತ್ಸವ

04/11/2025, 18:42

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಯುವಕರ ಸಂಘಟನೆ ಐ.ಸಿ. ವೈ. ಎಂ. ವತಿಯಿಂದ ಯುವೋತ್ಸವ ಕಾರ್ಯಕ್ರಮ ನಡೆಯಿತು.
ಚರ್ಚ್ ಪಾಲನಾ ಸಮಿತಿಯ ಸದಸ್ಯೆ ಹಾಗೂ ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ (ಪ್ರೆಸ್ಸಿ)ಅವರು ಮುಖ್ಯ ಅತಿಥಿಯಾಗಿದ್ದರು. ಅವರು ಮಾತನಾಡಿ ಯುವ ಶಕ್ತಿಯು ಅದ್ಭುತ ಶಕ್ತಿಯಾಗಿದೆ. ಸಮುದಾಯ, ಸಮಾಜ ಮತ್ತು ದೇಶದಲ್ಲಿ ಯುವಜನರು ಇದ್ದಲ್ಲಿ , ಯಾವುದೇ ಕೆಲಸಗಳು ಕಷ್ಟವಿಲ್ಲದೆ ನಡೆಯುತ್ತವೆ. ಯುವಜನರು ಒಂದಾಗಿ ಒಳ್ಳೆಯ ಉದ್ದೇಶಕ್ಕಾಗಿ ತಮ್ಮ ಶಕ್ತಿಯನ್ನು ವಿನಿಯೋಗಿಸಿದರೆ ಸಮೃದ್ಧಿಯು ನೆಲೆ ಕಾಣುತ್ತದೆ. ಈ ನಿಟ್ಟಿನಲ್ಲಿ ಪಾಲ್ದನೆ ಚರ್ಚ್ ನ ಐ.ಸಿ.ವೈ.ಎಂ. ಸಂಘಟನೆ ನಂಬರ್ ವನ್ ಆಗಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರೆಸಿಲ್ಲಾ ಫೆರ್ನಾಂಡಿಸ್‌ ಅವರನ್ನು ಅವರು ನೀಡುತ್ತಿರುವ ವಿವಿಧ ಸೇವೆಗಾಗಿ ಫಲ ಪುಷ್ಪಗಳನ್ನಿತ್ತು ಐಸಿವೈಎಂ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಶುಭ ಹಾರೈಸಿದರು. ವಂದನೀಯ ಫಾ. ಅಶ್ವಿನ್ ಕಾರ್ಡೋಜಾ ಮತ್ತು ವಂದನೀಯ ಫಾ. ಲಾರೆನ್ಸ್ ಕುಟಿನ್ಹಾ ಕಾರ್ಯಕ್ರಮಕ್ಕೆ ಸಹಕರಿಸಿದರು.

ಐ.ಸಿ.ವೈ.ಎಂ. ಸಿಟಿ ವಲಯದ ಅಧ್ಯಕ್ಷ ರಾಯನ್ ನೊರೊನ್ಹಾ, ಐ.ಸಿ.ವೈ.ಎಂ. ಪಾಲ್ದನೆ ಘಟಕದ ಅಧ್ಯಕ್ಷರಾದ ವಿಲೀಶಾ ಬ್ರ್ಯಾಗ್ಸ್, ಕಾರ್ಯದರ್ಶಿ ಮಿಶೆಲ್ ಲೋಬೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಐ.ಸಿ.ವೈ.ಎಂ. ಸಂಚಾಲಕ ಹಾಗೂ ಮದರ್ ತೆರೆಸಾ ವಾರ್ಡ್ ನ ಮುಖ್ಯಸ್ಥ ರೋಶನ್ ಮೊಂತೇರೊ ಉಪಸ್ಥಿತರಿದ್ದರು. ಸಂಘಟನೆಯ ಸದಸ್ಯರು ವಿವಿಧ ವಿನೋದಾವಳಿಗಳನ್ನು ಪ್ರಸ್ತುತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು