7:14 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ನಲ್ಲಿ ಐಸಿವೈಎಂ ವತಿಯಿಂದ ಯುವೋತ್ಸವ

04/11/2025, 18:42

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಯುವಕರ ಸಂಘಟನೆ ಐ.ಸಿ. ವೈ. ಎಂ. ವತಿಯಿಂದ ಯುವೋತ್ಸವ ಕಾರ್ಯಕ್ರಮ ನಡೆಯಿತು.
ಚರ್ಚ್ ಪಾಲನಾ ಸಮಿತಿಯ ಸದಸ್ಯೆ ಹಾಗೂ ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ (ಪ್ರೆಸ್ಸಿ)ಅವರು ಮುಖ್ಯ ಅತಿಥಿಯಾಗಿದ್ದರು. ಅವರು ಮಾತನಾಡಿ ಯುವ ಶಕ್ತಿಯು ಅದ್ಭುತ ಶಕ್ತಿಯಾಗಿದೆ. ಸಮುದಾಯ, ಸಮಾಜ ಮತ್ತು ದೇಶದಲ್ಲಿ ಯುವಜನರು ಇದ್ದಲ್ಲಿ , ಯಾವುದೇ ಕೆಲಸಗಳು ಕಷ್ಟವಿಲ್ಲದೆ ನಡೆಯುತ್ತವೆ. ಯುವಜನರು ಒಂದಾಗಿ ಒಳ್ಳೆಯ ಉದ್ದೇಶಕ್ಕಾಗಿ ತಮ್ಮ ಶಕ್ತಿಯನ್ನು ವಿನಿಯೋಗಿಸಿದರೆ ಸಮೃದ್ಧಿಯು ನೆಲೆ ಕಾಣುತ್ತದೆ. ಈ ನಿಟ್ಟಿನಲ್ಲಿ ಪಾಲ್ದನೆ ಚರ್ಚ್ ನ ಐ.ಸಿ.ವೈ.ಎಂ. ಸಂಘಟನೆ ನಂಬರ್ ವನ್ ಆಗಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರೆಸಿಲ್ಲಾ ಫೆರ್ನಾಂಡಿಸ್‌ ಅವರನ್ನು ಅವರು ನೀಡುತ್ತಿರುವ ವಿವಿಧ ಸೇವೆಗಾಗಿ ಫಲ ಪುಷ್ಪಗಳನ್ನಿತ್ತು ಐಸಿವೈಎಂ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಶುಭ ಹಾರೈಸಿದರು. ವಂದನೀಯ ಫಾ. ಅಶ್ವಿನ್ ಕಾರ್ಡೋಜಾ ಮತ್ತು ವಂದನೀಯ ಫಾ. ಲಾರೆನ್ಸ್ ಕುಟಿನ್ಹಾ ಕಾರ್ಯಕ್ರಮಕ್ಕೆ ಸಹಕರಿಸಿದರು.

ಐ.ಸಿ.ವೈ.ಎಂ. ಸಿಟಿ ವಲಯದ ಅಧ್ಯಕ್ಷ ರಾಯನ್ ನೊರೊನ್ಹಾ, ಐ.ಸಿ.ವೈ.ಎಂ. ಪಾಲ್ದನೆ ಘಟಕದ ಅಧ್ಯಕ್ಷರಾದ ವಿಲೀಶಾ ಬ್ರ್ಯಾಗ್ಸ್, ಕಾರ್ಯದರ್ಶಿ ಮಿಶೆಲ್ ಲೋಬೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಐ.ಸಿ.ವೈ.ಎಂ. ಸಂಚಾಲಕ ಹಾಗೂ ಮದರ್ ತೆರೆಸಾ ವಾರ್ಡ್ ನ ಮುಖ್ಯಸ್ಥ ರೋಶನ್ ಮೊಂತೇರೊ ಉಪಸ್ಥಿತರಿದ್ದರು. ಸಂಘಟನೆಯ ಸದಸ್ಯರು ವಿವಿಧ ವಿನೋದಾವಳಿಗಳನ್ನು ಪ್ರಸ್ತುತ ಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು