5:41 PM Tuesday17 - March 2026
ಬ್ರೇಕಿಂಗ್ ನ್ಯೂಸ್
ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,…

ಇತ್ತೀಚಿನ ಸುದ್ದಿ

Mangaluru | ಸೈಂಟ್ ತೆರೆಸಾ ಆಫ್ ಲಿಶುಕ್ಸ್ ಅವರ ಸಂತ ಪದವಿಯ ಶತಮಾನೋತ್ಸವ

08/11/2025, 10:03

ಮಂಗಳೂರು(reporterkarnataka.com): ಸೈಂಟ್ ತೆರೆಸಾ ಆಫ್ ಲಿಶುಕ್ಸ್ ಅವರಿಗೆ ಸಂತ ಪದವಿ ಪ್ರಾಪ್ತವಾಗಿ ನೂರು ವರ್ಷಗಳಾಗಿದ್ದು, ಶತಮಾನೋತ್ಸವ ಸಂಭ್ರಮದ ಬಲಿ ಪೂಜೆಯು ನವೆಂಬರ್ 9 ರಂದು ಅಪರಾಹ್ನ 3.30ಕ್ಕೆ ನಗರದ ಬೆಂದೂರು ಸೈಂಟ್ ಸೆಬಾಸ್ಟಿಯನ್ ಚರ್ಚಿನಲ್ಲಿ ನಡೆಯಲಿದೆ.

ಮಂಗಳೂರು ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯ ಮುಖ್ಯ ಕಾರ್ಮಿಕತ್ವ ವಹಿಸುವರು.
ಒಸಿಡಿ ಅಂದರೆ ಕಾರ್ಮೆಲ್ ಸಂಸ್ಥೆಯ ಧರ್ಮಗುರುಗಳು ಮತ್ತು ಧರ್ಮ ಭಗಿನಿಯರು, ಅಪೋಸ್ತಲಿಕ್ ಕಾರ್ಮೆಲ್, ಬೆಥನಿ ಮತ್ತು ಸಿ. ಎಸ್.ಎಸ್. ಟಿ. ಸಂಸ್ಥೆಯ ಹಾಗೂ ಕ್ರೈಸ್ತ ವಿಶ್ವಾಸಿಗಳ ಸಂಘ ಸಂಸ್ಥೆಗಳು ಸೇರಿಕೊಂಡು ಸಂಯುಕ್ತವಾಗಿ ಈ ಬಲಿ ಪೂಜೆಯನ್ನು ಆಯೋಜನೆ ಮಾಡಿವೆ.
ಬಲಿ ಪೂಜೆಯ ಬಳಿಕ ಸಭಾ ಕಾರ್ಯಕ್ರಮದಲ್ಲಿ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ, ಕಾರ್ಮೆಲ್ ಸಂಸ್ಥೆಯ ಕರ್ನಾಟಕ – ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಅತಿ ವಂದನೀಯ ಫಾ. ಸಿಲ್ವೆಸ್ಟರ್ ಡಿ ಸೋಜಾ, ಬೆಥನಿ ಸಂಸ್ಥೆಯ ಸುಪೀರಿಯರ್ ಜನರಲ್ ಅತಿ ವಂದನೀಯ ಸಿಸ್ಟರ್ ರೋಸ್ ಸೆಲಿನ್, ಅಪೋಸ್ತಲಿಕ್ ಕಾರ್ಮೆಲ್ ಸಂಸ್ಥೆಯ ಪ್ರೊವಿನ್ಶಿಯಲ್ ಅತಿ ವಂದನೀಯ ಸಿಸ್ಟರ್ ಮರಿಯಾ ನವೀನಾ, ಸಿಸ್ಟರ್ ಲಿಲ್ಲಿ ಪಿರೇರಾ, ಮಾಜಿ ಶಾಸಕ ಜೆ.ಆರ್. ಲೋಬೊ, ಎಪಿಸ್ಕೋಪಲ್ ವಿಕಾರ್ ಅತಿ ವಂದನೀಯ ಫಾ. ಡೇನಿಯಲ್ ವೇಗಸ್, ಕಾರ್ಯಕ್ರಮದ ಸಂಚಾಲಕ ಕಾರ್ಮೆಲ್ ಸಂಸ್ಥೆಯ ಗುರು ವಂದನೀಯ ಫಾ. ಡೊಮಿನಿಕ್ ವಾಸ್ ಅವರು ಅತಿಥಿಗಳಾಗಿ ಭಾಗವಹಿಸುವರು.
ಸಭಾ ಕಾರ್ಯಕ್ರಮದ ಬಳಿಕ ಕಾರ್ಮೆಲ್ ಸಂಸ್ಥೆಯ ಗುರು ಫಾ. ನೆಲ್ಸನ್ ಪಿಂಟೊ ವಿರಚಿತ ಮಾಂಡ್ ಸೊಭಾಣ್ ಪ್ರಸ್ತುತ ಪಡಿಸುವ ಸೈಂಟ್ ತೆರೆಸಾ ಆಫ್ ಚೈಲ್ಡ್ ಜೀಸಸ್ ಅವರ ಜೀವನ ಮತ್ತು ಆಧ್ಯಾತ್ಮಿಕತೆ ಕುರಿತ ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು