3:38 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

Mangaluru | ಸೈಂಟ್ ತೆರೆಸಾ ಆಫ್ ಲಿಶುಕ್ಸ್ ಅವರ ಸಂತ ಪದವಿಯ ಶತಮಾನೋತ್ಸವ

08/11/2025, 10:03

ಮಂಗಳೂರು(reporterkarnataka.com): ಸೈಂಟ್ ತೆರೆಸಾ ಆಫ್ ಲಿಶುಕ್ಸ್ ಅವರಿಗೆ ಸಂತ ಪದವಿ ಪ್ರಾಪ್ತವಾಗಿ ನೂರು ವರ್ಷಗಳಾಗಿದ್ದು, ಶತಮಾನೋತ್ಸವ ಸಂಭ್ರಮದ ಬಲಿ ಪೂಜೆಯು ನವೆಂಬರ್ 9 ರಂದು ಅಪರಾಹ್ನ 3.30ಕ್ಕೆ ನಗರದ ಬೆಂದೂರು ಸೈಂಟ್ ಸೆಬಾಸ್ಟಿಯನ್ ಚರ್ಚಿನಲ್ಲಿ ನಡೆಯಲಿದೆ.

ಮಂಗಳೂರು ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಅವರು ಬಲಿ ಪೂಜೆಯ ಮುಖ್ಯ ಕಾರ್ಮಿಕತ್ವ ವಹಿಸುವರು.
ಒಸಿಡಿ ಅಂದರೆ ಕಾರ್ಮೆಲ್ ಸಂಸ್ಥೆಯ ಧರ್ಮಗುರುಗಳು ಮತ್ತು ಧರ್ಮ ಭಗಿನಿಯರು, ಅಪೋಸ್ತಲಿಕ್ ಕಾರ್ಮೆಲ್, ಬೆಥನಿ ಮತ್ತು ಸಿ. ಎಸ್.ಎಸ್. ಟಿ. ಸಂಸ್ಥೆಯ ಹಾಗೂ ಕ್ರೈಸ್ತ ವಿಶ್ವಾಸಿಗಳ ಸಂಘ ಸಂಸ್ಥೆಗಳು ಸೇರಿಕೊಂಡು ಸಂಯುಕ್ತವಾಗಿ ಈ ಬಲಿ ಪೂಜೆಯನ್ನು ಆಯೋಜನೆ ಮಾಡಿವೆ.
ಬಲಿ ಪೂಜೆಯ ಬಳಿಕ ಸಭಾ ಕಾರ್ಯಕ್ರಮದಲ್ಲಿ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ, ಕಾರ್ಮೆಲ್ ಸಂಸ್ಥೆಯ ಕರ್ನಾಟಕ – ಗೋವಾ ಪ್ರಾಂತ್ಯದ ಪ್ರೊವಿನ್ಶಿಯಲ್ ಅತಿ ವಂದನೀಯ ಫಾ. ಸಿಲ್ವೆಸ್ಟರ್ ಡಿ ಸೋಜಾ, ಬೆಥನಿ ಸಂಸ್ಥೆಯ ಸುಪೀರಿಯರ್ ಜನರಲ್ ಅತಿ ವಂದನೀಯ ಸಿಸ್ಟರ್ ರೋಸ್ ಸೆಲಿನ್, ಅಪೋಸ್ತಲಿಕ್ ಕಾರ್ಮೆಲ್ ಸಂಸ್ಥೆಯ ಪ್ರೊವಿನ್ಶಿಯಲ್ ಅತಿ ವಂದನೀಯ ಸಿಸ್ಟರ್ ಮರಿಯಾ ನವೀನಾ, ಸಿಸ್ಟರ್ ಲಿಲ್ಲಿ ಪಿರೇರಾ, ಮಾಜಿ ಶಾಸಕ ಜೆ.ಆರ್. ಲೋಬೊ, ಎಪಿಸ್ಕೋಪಲ್ ವಿಕಾರ್ ಅತಿ ವಂದನೀಯ ಫಾ. ಡೇನಿಯಲ್ ವೇಗಸ್, ಕಾರ್ಯಕ್ರಮದ ಸಂಚಾಲಕ ಕಾರ್ಮೆಲ್ ಸಂಸ್ಥೆಯ ಗುರು ವಂದನೀಯ ಫಾ. ಡೊಮಿನಿಕ್ ವಾಸ್ ಅವರು ಅತಿಥಿಗಳಾಗಿ ಭಾಗವಹಿಸುವರು.
ಸಭಾ ಕಾರ್ಯಕ್ರಮದ ಬಳಿಕ ಕಾರ್ಮೆಲ್ ಸಂಸ್ಥೆಯ ಗುರು ಫಾ. ನೆಲ್ಸನ್ ಪಿಂಟೊ ವಿರಚಿತ ಮಾಂಡ್ ಸೊಭಾಣ್ ಪ್ರಸ್ತುತ ಪಡಿಸುವ ಸೈಂಟ್ ತೆರೆಸಾ ಆಫ್ ಚೈಲ್ಡ್ ಜೀಸಸ್ ಅವರ ಜೀವನ ಮತ್ತು ಆಧ್ಯಾತ್ಮಿಕತೆ ಕುರಿತ ಕೊಂಕಣಿ ನಾಟಕ ಪ್ರದರ್ಶನಗೊಳ್ಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು