4:28 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮಂಗಳೂರು ನೂತನ ಮೇಯರ್ ಬಿಜೆಪಿಯ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ: ಸಂಸದ, ಶಾಸಕರ ಅಭಿನಂದನೆ

19/09/2024, 21:35

ಮಂಗಳೂರು(reporterkarnataka.com): ಮಂಗಳೂರಿನ‌ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಹಾಗೂ ಉಪ ಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮನೋಜ್ ಕುಮಾರ್ 25ನೇ ಅವಧಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿಯ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.


ನೂತನ ಮೇಯರ್ ಹಾಗೂ ಉಪ ಮೇಯರ್ ಮುಂದಿನ 6 ತಿಂಗಳುಗಳ ಕಾಲ ಆಡಳಿತ ನಡೆಸಲಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ಮೀಸಲಿಡಲಾಗಿತ್ತು.
ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್ ಮತ್ತು ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂತೆಗೆದುಕೊಳ್ಳಲು 5 ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂತೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿ ಅವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14 ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀ ಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿ ಸಮಿತಿಗೆ ತಲಾ 7 ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61 ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ರೀಜನಲ್ ಕಮಿಷನರ್ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್‌ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು