11:30 PM Saturday27 - June 2026
ಬ್ರೇಕಿಂಗ್ ನ್ಯೂಸ್
ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:…

ಇತ್ತೀಚಿನ ಸುದ್ದಿ

ಮಂಗಳೂರು ನೂತನ ಮೇಯರ್ ಬಿಜೆಪಿಯ ಮನೋಜ್ ಕುಮಾರ್, ಉಪ ಮೇಯರ್ ಭಾನುಮತಿ: ಸಂಸದ, ಶಾಸಕರ ಅಭಿನಂದನೆ

19/09/2024, 21:35

ಮಂಗಳೂರು(reporterkarnataka.com): ಮಂಗಳೂರಿನ‌ ನೂತನ ಮೇಯರ್ ಆಗಿ ಮನೋಜ್ ಕುಮಾರ್ ಹಾಗೂ ಉಪ ಮೇಯರ್ ಆಗಿ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.
ಮನೋಜ್ ಕುಮಾರ್ 25ನೇ ಅವಧಿಯ ಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಬಿಜೆಪಿಯ ಭಾನುಮತಿ ಅವರು ಆಯ್ಕೆಯಾಗಿದ್ದಾರೆ.


ನೂತನ ಮೇಯರ್ ಹಾಗೂ ಉಪ ಮೇಯರ್ ಮುಂದಿನ 6 ತಿಂಗಳುಗಳ ಕಾಲ ಆಡಳಿತ ನಡೆಸಲಿದ್ದಾರೆ. ಮೇಯರ್ ಸ್ಥಾನಕ್ಕೆ ಪರಿಶಿಷ್ಟ ಜಾತಿ(ಎಸ್‌ಸಿ) ಹಾಗೂ ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ‘ಎ’ ಮೀಸಲಿಡಲಾಗಿತ್ತು.
ಕಾಂಗ್ರೆಸ್‌ನಲ್ಲಿ ಪರಿಶಿಷ್ಟ ಜಾತಿ(ಎಸ್‌ಸಿ) ಮೀಸಲು ಅಭ್ಯರ್ಥಿ ಇಲ್ಲದ ಹಿನ್ನೆಲೆಯಲ್ಲಿ ಮೇಯರ್ ಆಗಿ ಮನೋಜ್ ಕುಮಾರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮನೋಜ್ ಕುಮಾರ್ ಅವರು 2 ಉಮೇದುವಾರಿಕೆ ಸಲ್ಲಿಸಿದ್ದು, ಎರಡೂ ಸ್ವೀಕೃತಗೊಂಡಿದೆ.
ಉಪ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಭಾನುಮತಿ ಹಾಗೂ ವನಿತಾ ಪ್ರಸಾದ್ ಮತ್ತು ಕಾಂಗ್ರೆಸ್‌ನಿಂದ ಜೀನತ್ ಸಂಶುದ್ದೀನ್ ಸ್ಪರ್ಧಾ ಕಣದಲ್ಲಿದ್ದರು. ಚುನಾವಣಾ ಅಧಿಕಾರಿ ಉಮೇದುವಾರಿಕೆ ಹಿಂತೆಗೆದುಕೊಳ್ಳಲು 5 ನಿಮಿಷ ಅವಕಾಶ ನೀಡಿದ್ದು, ವನಿತಾ ಪ್ರಸಾದ್ ನಾಮಪತ್ರ ಹಿಂತೆಗೆಕೊಂಡರು. ಈ ಹಿನ್ನೆಲೆಯಲ್ಲಿ ಜೀನತ್ ಸಂಶುದ್ದೀನ್ ಹಾಗೂ ಭಾನುಮತಿ ಅವರು ಚುನಾವಣಾ ಕಣದಲ್ಲಿದ್ದರು. ಜೀನತ್ ಸಂಶುದ್ದೀನ್ ಪರ 14 ಮತ ಬಿದ್ದರೆ, ಭಾನುಮತಿಯವರಿಗೆ 47 ಮತ ಚಲಾವಣೆಯಾಯಿತು. ಈ ಮೂಲಕ ಭಾನುಮತಿಯವರು ಉಪಮೇಯರ್ ಆಗಿ ಆಯ್ಕೆಯಾದರು.
ತರಿಗೆ ಹಣಕಾಸು ಸ್ಥಾಯಿ ಸಮಿತಿ, ಆರೋಗ್ಯ ಶಿಕ್ಷಣ ಸ್ಥಾಯಿ ಸಮಿತಿ, ಪಟ್ಟಣ ಯೋಜನೆ ಸುಧಾರಣೆ ಸ್ಥಾಯೀ ಸಮಿತಿ, ಲೆಕ್ಕಪತ್ರ ಸ್ಥಾಯಿಸಮಿತಿ ಸೇರಿದಂತೆ ನಾಲ್ಕು ಸ್ಥಾಯಿ ಸಮಿತಿಗೆ ತಲಾ 7 ಮಂದಿ ಸದಸ್ಯರಂತೆ ಅವಿರೋಧವಾಗಿ ಆಯ್ಕೆಯಾದರು. ಚುನಾವಣೆ ನಡೆದ ವೇಳೆ 65 ಮನಪಾ ಸದಸ್ಯರಲ್ಲಿ 61 ಮಂದಿ ಹಾಜರಿದ್ದು, ಚುನಾವಣೆಯಲ್ಲಿ ಪಾಲ್ಗೊಂಡರು. ಮೈಸೂರು ರೀಜನಲ್ ಕಮಿಷನರ್ ರಮೇಶ್ ಡಿ.ಎಸ್. ಚುನಾವಣಾ ಅಧಿಕಾರಿಯಾಗಿ ಚುನಾವಣಾ ಪ್ರಕ್ರಿಯೆ ನಡೆಸಿದರು.
ನೂತನವಾಗಿ ಮೇಯರ್, ಉಪ ಮೇಯರ್‌ಗಳಿಗೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ, ಮನಪಾ ಸದಸ್ಯರು, ಅಭಿನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು