7:25 AM Friday20 - March 2026
ಬ್ರೇಕಿಂಗ್ ನ್ಯೂಸ್
Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು…

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್ ಶ್ವಾನ ದಳದ  ಲೀನಾ ಇನ್ನಿಲ್ಲ: ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ 

22/11/2021, 14:54

ಮಂಗಳೂರು(reporterkarnataka.com): ಇಡೀ ಕಡಲನಗರಿ ಯನ್ನೇ ಒಂದು ದಿನ ಪೂರ್ತಿ ತುದಿಗಾಲಿನಲ್ಲಿ ನಿಲ್ಲಿಸಿದ್ದ ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣವನ್ನು ಬೇಧಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐ ಎಸ್ ಎಫ್)ಯ ಶ್ವಾನ ಲೀನಾ(8) ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಸೇನಾ ಗೌರವದೊಂದಿಗೆ ಮೃತ ಲೀನಾಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಲೀನಾಳ ಅಂತ್ಯ ಸಂಸ್ಕಾರ ನಡೆಸಲಾಯಿತು. ಹೂವಿನಿಂದ ಅಲಂಕರಿಸಿದ ಪೆಟ್ಟಿಗೆಯಲ್ಲಿ ಇರಿಸಿ ಲೀನಾಳನ್ನು ತರಲಾಯಿತು.

2013 ಮೇ 5ರಂದು ಜನಿಸಿದ ಲೀನಾಗೆ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕುರಿತು ತರಬೇತಿ ನೀಡಲಾಗಿತ್ತು. ನಂತರ ಅದನ್ನು ಮಂಗಳೂರು ವಿಮಾನ ನಿಲ್ದಾಣ ಶ್ವಾನ ದಳಕ್ಕೆ ಸೇರಿಸಲಾಯಿತು.

2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎಂಬಾತ ಇರಿಸಿದ್ದ ಬಾಂಬ್ ಅನ್ನು ಇದೇ ಲೀನಾ ಪತ್ತೆ ಹಚ್ಚಿತ್ತು. ಮಂಗಳೂರು ವಿಮಾನ ನಿಲ್ದಾಣದ ಶ್ವಾನ ದಳದಲ್ಲಿರುವ 4 ಶ್ವಾನಗಳ ಪೈಕಿ ಲೀನಾ ಅತ್ಯಂತ ಚುರುಕು ಹಾಗೂ ಸೂಕ್ಷ್ಮಗ್ರಾಹಿ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು