11:14 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಂಗಳೂರಿನ ಎಡ್ವರ್ಡ್ ಮತ್ತು ಸಿಂಥಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಗೆ ಭಾರತ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ

25/07/2023, 19:40

ಮಂಗಳೂರು(reporter Karnataka.com): ನಗರದಲ್ಲಿರುವ ಯುನೆಸ್ಕೋದ ವಿಶೇಷ ಸಮಾಲೋಚನಾ ಸ್ಥಾನಮಾನವನ್ನು ಹೊಂದಿರುವ ಸಿಎಚ್ ಡಿ ಗ್ರೂಪ್‌ನ ಘಟಕವಾದ ಎಡ್ವರ್ಡ್ ಮತ್ತು ಸಿಂಥಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ (ಇಸಿಐಪಿಎಚ್)ಗೆ ವಿವಿಧ ಕೇಂದ್ರ ಸಚಿವಾಲಯಗಳ ಭಾರತ ಸರ್ಕಾರದ ಅಧೀನ ಕಾರ್ಯದರ್ಶಿಗಳು ಭೇಟಿ ನೀಡಿದರು.
ಶಿಕ್ಷಣ, ಆರೋಗ್ಯ, ಹಣಕಾಸು, ರಕ್ಷಣಾ, ಗ್ರಾಮೀಣಾಭಿವೃದ್ಧಿ, ಡಿಒಪಿಟಿ, ಕ್ಯಾಬಿನೆಟ್ ಸೆಕ್ರೆಟರಿಯೇಟ್, ಸ್ಟೀಲ್, ಸಿಬಿಐ, ಪಶುಸಂಗೋಪನೆ, ಕೃಷಿ, ಪರಿಸರ ಮತ್ತು ಭೂ ವಿಜ್ಞಾನ, ರಿಜಿಸ್ಟ್ರಾರ್ ಜನರಲ್, ಪ್ರವಾಸೋದ್ಯಮ, ಕಾರ್ಪೊರೇಟ್ ವ್ಯವಹಾರಗಳು, ವಸತಿ, ಮಾಹಿತಿ ಮತ್ತು ಪ್ರಸಾರಕ್ಕಾಗಿ ಸಿಎಚ್‌ಡಿ ಗ್ರೂಪ್‌ನ ಇವರ ಪ್ರಯತ್ನವು ದೇಶಾದ್ಯಂತದ ಜೀವನದ ಮೇಲೆ ಹೇಗೆ ಪ್ರಭಾವ ಮತ್ತು ಪರಿಣಾಮ ಬೀರುತ್ತಿದೆ ಎಂಬುದನ್ನು ಅರ್ಥ ಮಾಡಿ ಸಮಗ್ರ ಸಂವಾದಕ್ಕಾಗಿ ವಿವಿಧ ಸಚಿವಾಲಯಗಳ ಸುಮಾರು 36 ಅಧೀನ ಕಾರ್ಯದರ್ಶಿಗಳು ಬಂದಿದ್ದರು.
ಎಡ್ವರ್ಡ್ ಮತ್ತು ಸಿಂಥಿಯಾ ಇನ್‌ಸ್ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನಿರ್ದೇಶಕ ಡಾ. ಎಡ್ಮಂಡ್ ಫೆರ್ನಾಂಡಿಸ್ ಅವರು ಸಂಸ್ಥೆಯು ನಿರ್ವಹಿಸಿದ ಕೆಲಸವನ್ನು ಪರಿಚಯಿಸಿದರು ಮತ್ತು ಭಾರತದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೀತಿ ಸುಧಾರಣೆಗಳಿಗೆ ಸಿಎಚ್‌ಡಿ ಗ್ರೂಪ್ ಹೇಗೆ ಸಹಾಯ ಮಾಡುತ್ತಿದೆ ಎಂಬುದನ್ನು ವಿವರಿಸಿದರು. ಭಾರತ ಸರ್ಕಾರವು ವಿವರಿಸಿರುವ ಹಂಚಿಕೆಯ ಗುರಿಗಳು ಮತ್ತು ದೃಷ್ಟಿಕೋನಗಳನ್ನು ಸಾಧಿಸುವಲ್ಲಿ ಸಚಿವಾಲಯಗಳ ಏಕೀಕರಣದೊಂದಿಗೆ ಅಪಾಯದ ಮಾಹಿತಿಯ ಯೋಜನೆಯನ್ನು ರಚಿಸುವ ಅಗತ್ಯವಿರುವ ವಿವಿಧ ವಿಧಾನಗಳನ್ನು ಡಾ ಎಡ್ಮಂಡ್ ಸೂಚಿಸಿದರು. ಉಪ ಕಾರ್ಯದರ್ಶಿಗಳ ಸಭೆಯಲ್ಲಿ ಸಿಎಚ್‌ಡಿ ಗ್ರೂಪ್‌ನ ಕೆಲಸದ ಆರ್ಥಿಕ ಮತ್ತು ಸಾಮಾಜಿಕ ಪ್ರಭಾವವನ್ನು ವಿವರಿಸಲಾಯಿತು.


ಸಿಎಚ್‌ಡಿ ಗ್ರೂಪ್‌ನ ಅಖಿಲ ಭಾರತದಲ್ಲಿ ಜರುಗುವ ಕಾರ್ಯಗಳು 2.9 ಮಿಲಿಯನ್ ಜನರ ಮೇಲೆ ಪರಿಣಾಮ ಬೀರಿದೆ.
ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಮಾದರಿಗಳನ್ನು ಯಾವ ರೀತಿಯಲ್ಲಿ ಸದುಪಯೋಗಪಡಿಸಿಕೊಳ್ಳಬಹುದು ಮತ್ತು ಸರ್ಕಾರಿ-ಅಭಿವೃದ್ಧಿ ವಲಯದ ಸಹಭಾಗಿತ್ವವನ್ನು ಹೇಗೆ ಮತ್ತಷ್ಟು ಬಲಪಡಿಸಬಹುದು ಎಂಬುದರ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ನಿಶಾಂತ್ ಶೆಟ್ಟಿ, ಕಾರ್ಯನಿರ್ವಹಣಾ ಮುಖ್ಯಸ್ಥರು, ಸಿಎಚ್‌ಡಿ ಗ್ರೂಪ್ ಇವರು ಭಾರತ ಸರ್ಕಾರದೊಂದಿಗೆ ಕಾರ್ಯಕ್ರಮವನ್ನು ಸುಗಮಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು