5:59 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆ. 20ರಂದು ಆರಂಭ: ಏರ್ ಪೋರ್ಟ್ ನಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ

18/08/2021, 22:10

ಮಂಗಳೂರು(reporterkarnataka.com):  ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆಗಸ್ಟ್ 20ರಂದು ಆರಂಭಗೊಳ್ಳಲಿದ್ದು, ಟಿಕೆಟ್‌ ಬುಕ್ಕಿಂಗ್‌ ಆರಂಭಗೊಂಡಿದೆ.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಟ್ವಿಟ್ಟರ್‌ ಖಾತೆಯಲ್ಲಿ ಈ ವಿಷಯ ತಿಳಿಸಿದೆ.
ಈ ನಡುವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ ಟಿಪಿಸಿಆರ್ ಉಪಕರಣ ಅಳವಡಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ದುಬೈಗೆ ಬುಧವಾರದಿಂದ ವಿಮಾನ ಯಾನ ಸಂಚಾರ ಮತ್ತೆ ಆರಂಭಗೊಂಡಿದೆ. ಏರ್‌ ಇಂಡಿಯಾ ಎಕ್ಸ್‌ ಪ್ರಸ್‌ ವಿಮಾನವು ಮಂಗಳೂರಿನಿಂದ ಕೇರಳದ ತಿರುವನಂತಪುರ ಮೂಲಕ ದುಬೈ ತಲುಪಲಿದೆ. 

ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆಗಸ್ಟ್ 5 ರಂದು ವಾಪಸ್‌ ಪಡೆದಿತ್ತು. ಆದರೆ ಭಾರತದಿಂದ ಹೊರಡುವ 48 ಗಂಟೆ ಮೊದಲು ನಡೆಸಿದ ಆರ್‌.ಟಿ.ಪಿ.ಸಿ.ಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಮತ್ತು 4 ಗಂಟೆ ಮೊದಲು ನಡೆಸಿದ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಅತ್ಯಾಧುನಿಕ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆ ಬುಧವಾರದಿಂದ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು