4:01 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆ. 20ರಂದು ಆರಂಭ: ಏರ್ ಪೋರ್ಟ್ ನಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ

18/08/2021, 22:10

ಮಂಗಳೂರು(reporterkarnataka.com):  ಮಂಗಳೂರು- ದುಬೈ ನಡುವೆ ನೇರ ವಿಮಾನ ಸಂಚಾರ ಆಗಸ್ಟ್ 20ರಂದು ಆರಂಭಗೊಳ್ಳಲಿದ್ದು, ಟಿಕೆಟ್‌ ಬುಕ್ಕಿಂಗ್‌ ಆರಂಭಗೊಂಡಿದೆ.

ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಟ್ವಿಟ್ಟರ್‌ ಖಾತೆಯಲ್ಲಿ ಈ ವಿಷಯ ತಿಳಿಸಿದೆ.
ಈ ನಡುವೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ ಟಿಪಿಸಿಆರ್ ಉಪಕರಣ ಅಳವಡಿಸಿದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ದುಬೈಗೆ ಬುಧವಾರದಿಂದ ವಿಮಾನ ಯಾನ ಸಂಚಾರ ಮತ್ತೆ ಆರಂಭಗೊಂಡಿದೆ. ಏರ್‌ ಇಂಡಿಯಾ ಎಕ್ಸ್‌ ಪ್ರಸ್‌ ವಿಮಾನವು ಮಂಗಳೂರಿನಿಂದ ಕೇರಳದ ತಿರುವನಂತಪುರ ಮೂಲಕ ದುಬೈ ತಲುಪಲಿದೆ. 

ಭಾರತದ ವಿಮಾನಗಳಿಗೆ ಯುಎಇ ವಿಧಿಸಿದ್ದ ನಿರ್ಬಂಧವನ್ನು ಆಗಸ್ಟ್ 5 ರಂದು ವಾಪಸ್‌ ಪಡೆದಿತ್ತು. ಆದರೆ ಭಾರತದಿಂದ ಹೊರಡುವ 48 ಗಂಟೆ ಮೊದಲು ನಡೆಸಿದ ಆರ್‌.ಟಿ.ಪಿ.ಸಿ.ಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಮತ್ತು 4 ಗಂಟೆ ಮೊದಲು ನಡೆಸಿದ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಹೊಂದಿದವರು ಮಾತ್ರ ಯುಎಇಗೆ ಬರಬಹುದು ಎಂದು ಷರತ್ತು ವಿಧಿಸಿತ್ತು. ಹೀಗಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ರಾಪಿಡ್ ಆರ್‌ಟಿಪಿಸಿಆರ್ ಉಪಕರಣ ಅಳವಡಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಅತ್ಯಾಧುನಿಕ ರ್ಯಾಪಿಡ್‌ ಆರ್‌ಟಿಪಿಸಿಆರ್‌ ಪರೀಕ್ಷೆ ಬುಧವಾರದಿಂದ ಅಧಿಕೃತವಾಗಿ ಪ್ರಾರಂಭವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು