3:00 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೆಂಗಣ್ಣು; ಶಾಲಾ ಮಕ್ಕಳೇ ಟಾರ್ಗೆಟ್; ಭಯ ಬೇಡ ಎಂದ ವೈದ್ಯರು

18/11/2022, 11:01

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕೆಂಗಣ್ಣು ಕಾಯಿಲೆ ವ್ಯಾಪಕವಾಗಿ ಹಬ್ಬುತ್ತಿದ್ದು, ಇದು ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಕಾಣಿಸಿಕೊಂಡಿದೆ.

ಒಂದು ಅಂದಾಜು ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 50ರಷ್ಟು ಮಕ್ಕಳಲ್ಲಿ ಮೆಡ್ರಾಸ್ ಐ ಎಂದು ಕರೆಸಿಕೊಳ್ಳುವ ಕೆಂಗಣ್ಣು ಸಮಸ್ಯೆ ಕಂಡು ಬಂದಿದೆ. ಕಣ್ಣು ಕೆಂಪು ಮಾಡಿ ಹೋದ ಶಾಲಾ ಮಕ್ಕಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೆಲವು ಖಾಸಗಿ ಶಾಲೆಗಳಲ್ಲಿ ಕೆಂಗಣ್ಣು ಸಮಸ್ಯೆಗೆ ಗುರಿಯಾದ ಮಕ್ಕಳನ್ನು ಇತರ ಮಕ್ಕಳಿಂದ ಪ್ರತ್ಯೇಕಿಸಿ, ಡೈನಿಂಗ್ ಹಾಲ್ ನಲ್ಲಿ ಕೂರಿಸಲಾಗುತ್ತದೆ. ಹಾಗೆ ಮರುದಿನದಿಂದ ಕಾಯಿಲೆ ಗುಣ ಆಗುವ ವರೆಗೆ ಶಾಲೆಗೆ ಬರುವುದು ಬೇಡ ಎಂದು ಸೂಚಿಸಲಾಗುತ್ತಿದೆ.

ಮಕ್ಕಳು ಮಾತ್ರವಲ್ಲದೆ ವಯಸ್ಕರಿಗೆ ಕೂಡ ಕೆಂಗಣ್ಣು ಸಮಸ್ಯೆಗೆ ತುತ್ತಾಗಿದ್ದಾರೆ.ಕೆಂಗಣ್ಣು ಕಾಯಿಲೆ ಪ್ರತಿ ವರ್ಷ ಅಲ್ಲಲ್ಲಿ ಕಾಣಿಸುತ್ತಿದ್ದು, ಕಣ್ಣಿನ ಡ್ರಾಫ್ಸ್ ಮೂಲಕ ಕೆಂಗಣ್ಣನ್ನು ಗುಣಪಡಿಸಬಹುದು.

ಕೆಂಗಣ್ಣಿಗೆ ಗುರಿಯಾದವರು ಕಣ್ಣುಜ್ಜದೇ, ವೈದ್ಯರ ಸಲಹೆ ಪಡೆದು ಕಣ್ಣಿಗೆ ಡ್ರಾಫ್ಸ್ ಹಾಕಿಸಿಕೊಂಡರೆ ಶೀಘ್ರ ಗುಣಮುಖರಾಗಲು ಸಾಧ್ಯ. ಇದರ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು