2:26 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು: ವ್ಯಾಪಕವಾಗಿ ಹಬ್ಬುತ್ತಿರುವ ಕೆಂಗಣ್ಣು; ಶಾಲಾ ಮಕ್ಕಳೇ ಟಾರ್ಗೆಟ್; ಭಯ ಬೇಡ ಎಂದ ವೈದ್ಯರು

18/11/2022, 11:01

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕೆಂಗಣ್ಣು ಕಾಯಿಲೆ ವ್ಯಾಪಕವಾಗಿ ಹಬ್ಬುತ್ತಿದ್ದು, ಇದು ವಿಶೇಷವಾಗಿ ಶಾಲಾ ಮಕ್ಕಳಲ್ಲಿ ಕಾಣಿಸಿಕೊಂಡಿದೆ.

ಒಂದು ಅಂದಾಜು ಸಮೀಕ್ಷೆ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 50ರಷ್ಟು ಮಕ್ಕಳಲ್ಲಿ ಮೆಡ್ರಾಸ್ ಐ ಎಂದು ಕರೆಸಿಕೊಳ್ಳುವ ಕೆಂಗಣ್ಣು ಸಮಸ್ಯೆ ಕಂಡು ಬಂದಿದೆ. ಕಣ್ಣು ಕೆಂಪು ಮಾಡಿ ಹೋದ ಶಾಲಾ ಮಕ್ಕಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇನ್ನು ಕೆಲವು ಖಾಸಗಿ ಶಾಲೆಗಳಲ್ಲಿ ಕೆಂಗಣ್ಣು ಸಮಸ್ಯೆಗೆ ಗುರಿಯಾದ ಮಕ್ಕಳನ್ನು ಇತರ ಮಕ್ಕಳಿಂದ ಪ್ರತ್ಯೇಕಿಸಿ, ಡೈನಿಂಗ್ ಹಾಲ್ ನಲ್ಲಿ ಕೂರಿಸಲಾಗುತ್ತದೆ. ಹಾಗೆ ಮರುದಿನದಿಂದ ಕಾಯಿಲೆ ಗುಣ ಆಗುವ ವರೆಗೆ ಶಾಲೆಗೆ ಬರುವುದು ಬೇಡ ಎಂದು ಸೂಚಿಸಲಾಗುತ್ತಿದೆ.

ಮಕ್ಕಳು ಮಾತ್ರವಲ್ಲದೆ ವಯಸ್ಕರಿಗೆ ಕೂಡ ಕೆಂಗಣ್ಣು ಸಮಸ್ಯೆಗೆ ತುತ್ತಾಗಿದ್ದಾರೆ.ಕೆಂಗಣ್ಣು ಕಾಯಿಲೆ ಪ್ರತಿ ವರ್ಷ ಅಲ್ಲಲ್ಲಿ ಕಾಣಿಸುತ್ತಿದ್ದು, ಕಣ್ಣಿನ ಡ್ರಾಫ್ಸ್ ಮೂಲಕ ಕೆಂಗಣ್ಣನ್ನು ಗುಣಪಡಿಸಬಹುದು.

ಕೆಂಗಣ್ಣಿಗೆ ಗುರಿಯಾದವರು ಕಣ್ಣುಜ್ಜದೇ, ವೈದ್ಯರ ಸಲಹೆ ಪಡೆದು ಕಣ್ಣಿಗೆ ಡ್ರಾಫ್ಸ್ ಹಾಕಿಸಿಕೊಂಡರೆ ಶೀಘ್ರ ಗುಣಮುಖರಾಗಲು ಸಾಧ್ಯ. ಇದರ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಸಲಹೆ ನೀಡುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು